ಮಂಡ್ಯ: ಚುನಾವಣೆ ಬಂತು ಅಂದ್ರೆ ಸಾಕು ಕುಮಾರಸ್ವಾಮಿ ಆಸ್ಪತ್ರೆ ಸೇರ್ತಾರೆ. ಅದು ಹೇಗೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಚುನಾವಣೆ ಬಂದಾಗ ಹೃದಯದ ಸಮಸ್ಯೆ ಅಂತಾರೆ. ಚುನಾವಣೆ ಹತ್ತಿರ ಇದ್ದಾಗ ಆಸ್ಪತ್ರೆ ಸೇರ್ತಾರೆ. ಮೂರೇ ದಿನಕ್ಕೆ ಆಸ್ಪತ್ರೆಯಿಂದ ಹೊರಗೆ ಬಂದು ರಾಜ್ಯ ಸುತ್ತಾಡ್ತಿರ್ತಾರೆ. ಅದೆಂಗೆ ಸಾಧ್ಯ ಅಂತ ಅರ್ಥ ಆಗ್ತಾ ಇಲ್ಲ ಎಂಬುದಾಗಿ ಹೇಳಿದರು.
ಯಾರಾದ್ರು ಹಾರ್ಟ್ ಪೇಸೆಂಟ್ ಹೀಗೆ ಓಡಾಡುತ್ತಾರಾ? ನಮ್ಮ ಚಲುವಣ್ಣನಿಗೂ ಅದೇ ರೀತಿ ಹೃದಯದ ಸಮಸ್ಯೆ ಇದೆ. ಆದ್ರೆ ಇವರು ಆಸ್ಪತ್ರೆ ಸೇರಿದ್ರೆ ತಿಂಗಳು ಗಟ್ಟಳೆ ಬರಲ್ಲ. ಆಪರೇಷನ್ ಆದ ಎರಡೇ ದಿನಕ್ಕೆ ಹೊರಗೆ ಬರೋದು ಗೊತ್ತಿಲ್ಲ. ಇದು ಹೆಂಗೆ ಹೊಸ ಟೆಕ್ನಿಕ್ ಹೆಂಗೆ ಅಂತ ಗೊತ್ತಾಗ್ತಿಲ್ಲ ಎಂದರು.
ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆಯುತ್ತಿರೊ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಟೀಕೆ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296