nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ– ಗೆದ್ದಾಗ ಏನೂ ಹೇಳುವುದಿಲ್ಲ: ಸುಪ್ರೀಂ ಕೋರ್ಟ್
    ತುಮಕೂರು November 28, 2024

    ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ– ಗೆದ್ದಾಗ ಏನೂ ಹೇಳುವುದಿಲ್ಲ: ಸುಪ್ರೀಂ ಕೋರ್ಟ್

    By adminNovember 28, 2024No Comments1 Min Read
    evm

    ತುಮಕೂರು: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 26ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ. ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ.

    ಈ ಹಿಂದೆ ಆಂಧ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂಗಳನ್ನು ತಿರುಚಬಹುದು ಎಂಬ ಆರೋಪ–ಪ್ರತ್ಯಾರೋಪಗಳನ್ನು ಸ್ಮರಿಸಿ ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗವಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿದೆ.

    ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.

    ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ. ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ಇದನ್ನೆಲ್ಲ ವಾದಿಸುವ ಸ್ಥಳ ಇದಲ್ಲವೆಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ

    July 26, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.