nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025
    Facebook Twitter Instagram
    ಟ್ರೆಂಡಿಂಗ್
    • ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್
    • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ
    • ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?
    • ತಿಪಟೂರು: ಸ್ಯಾನಿಟರಿ ಪ್ಯಾಡ್ ನೀಡಿಲ್ಲ, ವಿದ್ಯಾರ್ಥಿನಿಯರನ್ನು ಬಿಕಾರಿ ಅಂತಾರಂತೆ: ಉಪಲೋಕಾಯುಕ್ತ ಮುಂದೆ ವಿದ್ಯಾರ್ಥಿನಿಯರ ಅಳಲು
    • ಹುಲಿ ದಾಳಿ | ಸಫಾರಿ ಬಂದ್ ಅಸಂಬದ್ಧ: ನಿಖಿಲ್ ಕುಮಾರಸ್ವಾಮಿ ಆಕ್ರೋಶ
    • ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ
    • ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ– ಗೆದ್ದಾಗ ಏನೂ ಹೇಳುವುದಿಲ್ಲ: ಸುಪ್ರೀಂ ಕೋರ್ಟ್
    ತುಮಕೂರು November 28, 2024

    ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ– ಗೆದ್ದಾಗ ಏನೂ ಹೇಳುವುದಿಲ್ಲ: ಸುಪ್ರೀಂ ಕೋರ್ಟ್

    By adminNovember 28, 2024No Comments1 Min Read
    evm

    ತುಮಕೂರು: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 26ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ. ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ.


    Provided by
    Provided by

    ಈ ಹಿಂದೆ ಆಂಧ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂಗಳನ್ನು ತಿರುಚಬಹುದು ಎಂಬ ಆರೋಪ–ಪ್ರತ್ಯಾರೋಪಗಳನ್ನು ಸ್ಮರಿಸಿ ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗವಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿದೆ.

    ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.

    ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ. ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ಇದನ್ನೆಲ್ಲ ವಾದಿಸುವ ಸ್ಥಳ ಇದಲ್ಲವೆಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025

    ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ

    December 1, 2025

    ಡಿ.3: ಶ್ರೀ ಕ್ಷೇತ್ರ ಮಿಂಚುಕಲ್ಲು ಬೆಟ್ಟ: ಮಹಾಕುಂಭಾಭೀಷೇಕ ಮಹೋತ್ಸವ

    November 30, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಮಧುಗಿರಿ: ಕನ್ನಡ ರಾಜ್ಯೋತ್ಸವ ನವೆಂಬರ್‌ಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ವಿಧಾನಸಭಾ ಸಚಿವಾಲಯದ ನಿರ್ದೇಶಕ ಶಶಿಧರ್ ತಿಳಿಸಿದರು. ಪಟ್ಟಣದ ಏಕಾಶಿಲಾ ಬೆಟ್ಟದಲ್ಲಿ…

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025

    ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?

    December 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.