nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ

    January 18, 2026

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    January 18, 2026
    Facebook Twitter Instagram
    ಟ್ರೆಂಡಿಂಗ್
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    • ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    • ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
    • ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಪ್ಪನ್​ ಗೆ ರಾಜ್​ ಕುಮಾರ್ ಅವರನ್ನು ಅಪಹರಣ ಮಾಡುವಂತೆ ಐಡಿಯಾ ಕೊಟ್ಟಿದ್ದು ಯಾರು?
    ರಾಜ್ಯ ಸುದ್ದಿ August 4, 2024

    ವೀರಪ್ಪನ್​ ಗೆ ರಾಜ್​ ಕುಮಾರ್ ಅವರನ್ನು ಅಪಹರಣ ಮಾಡುವಂತೆ ಐಡಿಯಾ ಕೊಟ್ಟಿದ್ದು ಯಾರು?

    By adminAugust 4, 2024No Comments3 Mins Read
    veerappan rajkumar

    ವೀರಪ್ಪನ್, ರಾಜ್​ಕುಮಾರ್ ಅವರನ್ನು ಅಪಹರಿಸಿ 24 ವರ್ಷಗಳಾದವು. ಅಂದಹಾಗೆ ವೀರಪ್ಪನ್, ರಾಜ್ ​ಕುಮಾರ್ ಅವರನ್ನೇ ಅಪಹರಣ ಮಾಡಿದ್ದು ಏಕೆ? ಮಹಾದಡ್ಡನಾಗಿದ್ದ ವೀರಪ್ಪನ್ ​ಗೆ ರಾಜ್​ ಕುಮಾರ್ ಅವರನ್ನು ಅಪಹರಣ ಮಾಡುವಂತೆ ಐಡಿಯಾ ಕೊಟ್ಟಿದ್ದು ಯಾರು?

    24 ವರ್ಷದ ಹಿಂದೆ ಇದೇ ಭೀಮನ ಅಮವಾಸ್ಯೆ ದಿನವೇ ರಾಜ್​ಕುಮಾರ್ ಅಪಹರಣವಾಗಿತ್ತು. ಅಷ್ಟಕ್ಕೂ ರಾಜ್​ಕುಮಾರ್ ಅವರನ್ನೇ ಅಪಹರಣ ಮಾಡಬೇಕು ಎಂಬ ಐಡಿಯಾ ವೀರಪ್ಪನ್​ಗೆ ಬಂದಿದ್ದು ಹೇಗೆ? ಅಸಲಿಗೆ ವೀರಪ್ಪನ್, ಕಾಡಿನಲ್ಲಿ ಕುಕೃತ್ಯಗಳನ್ನು 1980ರಲ್ಲಿಯೇ ಪ್ರಾರಂಭ ಮಾಡಿದ ಆದರೆ 1990ರ ದಶಕದ ಅಂತ್ಯದ ವೇಳೆಗೆ ಪೊಲೀಸ್, ಅರಣ್ಯ ಇಲಾಖೆಯವರ ಶಿಸ್ತಿನ ಕಾರ್ಯಾಚರಣೆಗಳಿಂದ ಗಂಧದ ಕಳ್ಳಸಾಗಣೆ, ಆನೆದಂತದ ವ್ಯಾಪಾರಗಳು ಕ್ಷೀಣಿಸಿದ್ದವು. ಎಸ್​ಐಟಿ ಅಧಿಕಾರಿ ಕೆ ವಿಜಯ್ ಕುಮಾರ್ ಹೇಳುವಂತೆ 1995 ರಿಂದ ಆಚೆಗೆ ವೀರಪ್ಪನ್ ಬಳಿ ಹಣವೇ ಇರಲಿಲ್ಲವಂತೆ. ತೀರ ಸಣ್ಣ ಪುಟ್ಟ ಹಣಕ್ಕೂ ಕಾಡಿನಲ್ಲಿ ದರೋಡೆಗಳನ್ನು ಮಾಡಲು ಪ್ರಾರಂಭಿಸಿದ್ದನಂತೆ ವೀರಪ್ಪನ್. ಒಂದು ಬಾರಿಯಂತೂ ತನ್ನ ಕೊರಳಲ್ಲಿದ್ದ ಚಿನ್ನದ ಸರವನ್ನೂ ಸಹ ಅಡವಿಟ್ಟು ಹಣ ಪಡೆದಿದ್ದನಂತೆ. ಅದೇ ಸಮದಯಲ್ಲಿ ವೀರಪ್ಪನ್​ ಗೆ ಅಪಹರಣದ ಐಡಿಯಾ ಬಂದಿದ್ದು.


    Provided by
    Provided by

    veerappan rajkumar

    ಯಾರನ್ನೇ ಅಪಹರಿಸಿದರೂ ಹಣ ಸಿಕ್ಕಿಬಿಡುತ್ತದೆ ಎಂಬ ಮೂಡನಂಬಿಕೆಯಲ್ಲಿದ್ದ ವೀರಪ್ಪನ್ ರಾಜ್​ ಕುಮಾರ್ ಅವರನ್ನು ಅಪಹರಿಸುವ ಮುನ್ನ ಕರ್ನಾಟಕದ ಖ್ಯಾತ ವನ್ಯಜೀವಿ ಸಂಶೋಧಕರೂ ಫೊಟೊಗ್ರಾಫರ್ ​ಗಳೂ ಆಗಿರುವ ಕೃಪಾಕರ ಮತ್ತು ಸೇನಾನಿಯನ್ನು ಅಪಹರಣ ಮಾಡಿದ್ದ. ಆದರೆ ಆ ಇಬ್ಬರೂ, ವೀರಪ್ಪನ್ ಗೆ ಚೆನ್ನಾಗಿ ಮನವರಿಕೆ ಮಾಡಿಸಿದ ಬಳಿಕ ಇಬ್ಬರನ್ನೂ ಬಿಟ್ಟು ಕಳಿಸಿದ್ದ. ಅದಾದ ಬಳಿಕ ಫ್ರೊಫೆಸರ್ ಒಬ್ಬನನ್ನು ಕಿಡ್ನ್ಯಾಪ್ ಮಾಡಿದ್ದ. ಆದರೆ ಅದರಿಂದಲೂ ಆತನಿಗೆ ಹಣ ಸಿಗಲಿಲ್ಲ. ಆಗ ವೀರಪ್ಪನ್​ ಗೆ ಅರಿವಾಗಿದ್ದು ದೊಡ್ಡ ವ್ಯಕ್ತಿಗಳನ್ನು ಅಪಹರಿಸಿದರೆ ಮಾತ್ರವೇ ಹಣ ಸಿಗುತ್ತದೆ ಎಂದು.

    ವೀರಪ್ಪನ್ ಮೊದಲಿಗೆ ಅಪಹರಣ ಮಾಡಬೇಕು ಎಂದುಕೊಂಡಿದ್ದು ಖ್ಯಾತ ನಟ ರಜನೀಕಾಂತ್ ಅವರನ್ನು. ರಜನೀಕಾಂತ್ ಅವರನ್ನು ಅಪಹರಿಸಲು ಯೋಜನೆ ಸಹ ನಡೆದಿತ್ತು. ವೀರಪ್ಪನ್ ​ನ ಕೆಲವು ಸಹಚರರು ಚೆನ್ನೈಗೆ ಬಂದು ರಜನೀಕಾಂತ್ ಅವರ ಜೀವನ ಶೈಲಿ, ಓಡಾಟಗಳನ್ನೆಲ್ಲ ವೀಕ್ಷಿಸಿದ್ದರು. ಆದರೆ ಚೆನ್ನೈಗೆ ಹೋಗಿ ಅಪಹರಿಸಿ ಅಲ್ಲಿಂದ ತಮ್ಮ ಕಾಡುಗಳಿಗೆ ರಜನೀಕಾಂತ್ ಅನ್ನು ಕರೆತರುವುದು ಸಾಧ್ಯವಿಲ್ಲದ ಮಾತೆಂದು ಆ ಯೋಜನೆಯನ್ನು ಕೈಬಿಟ್ಟರು.

    ಅದಾದ ಬಳಿಕ ರಾಜಕಾರಣಿ ಸ್ಟಾಲಿನ್ ಅನ್ನು ಅಪಹರಣ ಮಾಡುವ ಯೋಜನೆ ರೂಪಿತವಾಯ್ತು. ಸಿಎಂ ಕರುಣಾನಿಧಿ ಪುತ್ರ ಸ್ಟಾಲಿನ್ ಅನ್ನು ಅಪಹರಣ ಮಾಡಿದರೆ ಒಳ್ಳೆಯ ಹಣ ಸಿಗುತ್ತದೆ ಎಂದು ಲೆಕ್ಕಾಚಾರ ಹಾಕಿಕೊಂಡಿತು ವೀರಪ್ಪನ್ ಗುಂಪು. ಆದರೆ ಇಲ್ಲಿ ಇನ್ನೂ ದೊಡ್ಡ ಸಮಸ್ಯೆ ಎದುರಾಯ್ತು. ಈಗ ತಮಿಳುನಾಡಿನ ಸಿಎಂ ಆಗಿರುವ ಸ್ಟಾಲಿನ್ ಆಗ ಚೆನ್ನೈ ಮುನಿಸಿಪಾಲಿಟಿ ಅಧ್ಯಕ್ಷರಾಗಿದ್ದರು. ಸಿಎಂ ಪುತ್ರ ಸಹ ಆಗಿದ್ದ ಕಾರಣ ಅವರ ಸುತ್ತ ಗನ್​ಮ್ಯಾನ್ ​ಗಳು ಯಾವಾಗಲೂ ಇರುತ್ತಿದ್ದರು. ಅವರನ್ನು ಭೇದಿಸಿ ಸ್ಟಾಲಿನ್ ಅನ್ನು ಅಪಹರಣ ಮಾಡುವುದು ಕಷ್ಟವೆಂಬ ಕಾರಣಕ್ಕೆ ಸ್ಟಾಲಿನ್ ಅನ್ನು ಅಪಹರಿಸುವ ಯೋಜನೆಯನ್ನು ಕೈಬಿಡಲಾಯ್ತು.

    ಆಗ ವೀರಪ್ಪನ್ ತಂಡದಲ್ಲಿದ್ದ ಗಾಜನೂರಿನ ವ್ಯಕ್ತಿಯೇ ಒಬ್ಬ ರಾಜ್​ಕುಮಾರ್ ಅವರನ್ನು ಅಪಹರಿಸುವ ಐಡಿಯಾ ಕೊಟ್ಟ. ಆ ವ್ಯಕ್ತಿ, ರಾಜ್ ​ಕುಮಾರ್ ಅವರ ಗಾಜನೂರಿನ ಮನೆ ಕಟ್ಟುವ ಕಾರ್ಮಿಕನಾಗಿ ಕೆಲಸ ಮಾಡಿದ್ದ ಎನ್ನಲಾಗುತ್ತದೆ. ಆದರೆ ರಾಜ್​ ಕುಮಾರ್ ಹೆಸರು ಕೇಳುತ್ತಿದ್ದಂತೆ ವೀರಪ್ಪನ್​ ಖುಷಿಯಾಗಿಬಿಟ್ಟ. ಅದಾದ ಬಳಿಕ ತನ್ನ ಈ ಯೋಜನೆಯನ್ನು ತನ್ನ ಕೆಲವು ‘ಸಲಹೆಗಾರ’ರೊಟ್ಟಿಗೆ ಚರ್ಚಿಸಿದ. ಅವರಿಂದಲೂ ಯೋಜನೆಗೆ ಅನುಮೋದನೆ ಸಿಕ್ಕಿತು ಮಾತ್ರವಲ್ಲದೆ. ರಾಜ್​ಕುಮಾರ್ ಅಪಹರಣದ ಬಳಿಕ ತಾನೊಬ್ಬ ಹೀರೋ ಆಗಿಬಿಡಬಹುದು ಎಂಬ ಮುಂದಾಲೋಚನೆಯೂ ವೀರಪ್ಪನ್​ ಗೆ ಮೂಡಿತು. ಹಾಗಾಗಿ ರಾಜ್​ಕುಮಾರ್ ಅವರನ್ನು ಅಪಹರಿಸಿದ್ದು ಮಾತ್ರವೇ ಅಲ್ಲದೆ, ಅಪಹರಣದ ಬಳಿಕ ಇಟ್ಟ ಬೇಡಿಕೆಗಳನ್ನು ಸಹ ಬಹಳ ಎಚ್ಚರಿಕೆಯಿಂದ ಮತ್ತು ತನ್ನ ಇಮೇಜನ್ನು ಉತ್ತಮಪಡಿಸಿಕೊಳ್ಳುವ ಬೇಡಿಕೆಗಳನ್ನೇ ಇಟ್ಟಿದ್ದ. 2000ನೇ ಇಸವಿಯ ಜುಲೈ 30 ರಂದು ಗಾಜನೂರಿನ ಮನೆಯಿಂದ ರಾಜ್ ​ಕುಮಾರ್ ಅವರನ್ನು ವೀರಪ್ಪನ್ ಅಪಹರಣ ಮಾಡಿದ. ವಿಶೇಷವೆಂದರೆ ಅಪಹರಣ ನಡೆದ ದಿನ ಗಾಜನೂರಿನಿಂದ ಕೇವಲ 50 ಕಿ.ಮೀ ದೂರದಲ್ಲಿ ವಿಶೇಷ ದಳ ಎಸ್​ ಟಿಎಫ್, ವೀರಪ್ಪನ್ ಬಗ್ಗೆ ವಿಶೇಷ ಸಭೆಯನ್ನು ನಡೆಸಿತ್ತು. ಆದರೆ ಎರಡು ಸರ್ಕಾರಗಳು, ಎರಡು ರಾಜ್ಯಗಳ ಪೊಲೀಸ್ ಪಡೆಗಳ ಕಣ್ಣು ತಪ್ಪಿಸಿ ಆತ ಕರ್ನಾಟಕದ ಮೇರು ನಟನನ್ನು ಅಪಹರಿಸಿದ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಜರುಗಲಿರುವ 33ನೇ ವರ್ಷದ ಹೊನಲು ಬೆಳಕಿನ…

    ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ

    January 18, 2026

    ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!

    January 18, 2026

    ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ

    January 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.