ಬೆಂಗಳೂರು: ದುಡ್ಡಿಲ್ಲ ಅಂತ ಯಾರು ಹೇಳಿದ್ದು?. ನಾನು ತಮಾಷೆಗೆ ಹೇಳಿದ್ದೇನೆ ಅಷ್ಟೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಿದ್ದರಾಮಯ್ಯರ ಬಳಿ ಹಣವಿಲ್ಲ ಎಂಬ ವಿಡಿಯೋವೊಂದು ವೈರಲ್ ಆಗಿರುವ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ನಾನು ಸರ್ಕಾರದ ಬಳಿ ದುಡ್ಡಿಲ್ಲ ಅಂತ ಹೇಳಿಲ್ಲ. ಯಾವುದೇ ರೀತಿಯ ಆರ್ಥಿಕ ಮುಗ್ಗಟ್ಟು ಇಲ್ಲ. ಹಣ ಬಿಡುಗಡೆ ಸ್ವಲ್ಪ ನಿಧಾನ ಆಗಿರಬಹುದು. ಡಿಪಿಆರ್ ಮಾಡೋದ್ರಲ್ಲಿ ತಡ ಆಗಿರಬಹುದು ಎಂದು ಸ್ಪಷ್ಟಪಡಿಸಿದರು.
ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಕರಣ ಸಂಬಂಧ ಮಾತನಾಡಿ, “ನನಗೆ ಬಂದಿರುವ ಮಾಹಿತಿ ಪ್ರಕಾರ ಅನಂತ್ ಕುಮಾರ್ ಹೆಗಡೆ ಹೈವೈನಲ್ಲಿ ಬರಬೇಕಾದರೆ ಘಟನೆ ನಡೆದಿದೆ. ಡ್ರೈವರ್, ಗನ್ ಮ್ಯಾನ್ ಕಾರು ನಿಲ್ಲಿಸಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಆದರೆ ಗನ್ ಮ್ಯಾನ್ ಹೊಡೆದಿಲ್ಲ ಅಂತಿದ್ದಾರೆ. ಇದರ ಬಗ್ಗೆ ಈಗಲೇ ಹೇಳೋಕೆ ಆಗಲ್ಲ. ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕಿದೆ. ಇನ್ನಷ್ಟು ದಿನ ಕಾದು ನೋಡೋಣ. ತನಿಖೆಯಲ್ಲಿ ಏನು ಬರುತ್ತೆ ಅಂತ ನೋಡೋಣ ಎಂದರು.
ಗಾಂಜಾ ವ್ಯಸನಿಗಳು ಯುವತಿ ಮೇಲೆ ಹಲ್ಲೆ ವಿಚಾರವಾಗಿ ಮಾತನಾಡಿ, “ಇಂತಹ ಘಟನೆಗಳನ್ನು ಲಘುವಾಗಿ ಪರಿಗಣಿಸಲ್ಲ. ಕೂಡಲೇ ಕೇಸ್ ಹಾಕಿ ಅರೆಸ್ಟ್ ಮಾಡುತ್ತೇವೆ. ಕೂಡಲೇ ಕ್ರಮ ತೆಗೆದುಕೊಳ್ಳುವ ಕೆಲಸ ಆಗಿದೆ. ಇವು ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಹಾಗಾಗಿ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW