nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025
    Facebook Twitter Instagram
    ಟ್ರೆಂಡಿಂಗ್
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    • ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೃತ್ಯು ಪತ್ರ ( will deed): ಉಯಿಲನ್ನು ಮಾಡುವಾಗ ಮುಖ್ಯವಾಗಿ ಪಾಲಿಸಬೇಕಾದ ಸಂಗತಿಗಳು: ಸಂಚಿಕೆ-02
    ಲೇಖನ December 16, 2021

    ಮೃತ್ಯು ಪತ್ರ ( will deed): ಉಯಿಲನ್ನು ಮಾಡುವಾಗ ಮುಖ್ಯವಾಗಿ ಪಾಲಿಸಬೇಕಾದ ಸಂಗತಿಗಳು: ಸಂಚಿಕೆ-02

    By adminDecember 16, 2021No Comments3 Mins Read
    uyilu pathra

    ಉಯಿಲು ಬರವಣಿಗೆಯಲ್ಲಿಯೇ ಇರತಕ್ಕದ್ದು: ಸಾಧ್ಯವಾದರೆ ಉಯಿಲು ಕರ್ತನು ಅದನ್ನು ತನ್ನ ಕೈಬರಹದಲ್ಲಿಯೇ ಬರೆಯುವುದು ಸೂಕ್ತ. ಉಯಿಲನ್ನು ಯಾವುದೇ ಭಾಷೆಯಲ್ಲಿ ಯಾವುದೇ ಶೈಲಿಯಲ್ಲಿ ಬರೆಯಬಹುದು. ಉಯಿಲನ್ನು ಛಾಪಾ ಕಾಗದದ ಮೇಲೆಯೇ ಬರೆಯಬೇಕೆಂದೇನಿಲ್ಲ. ಉತ್ತಮ ದರ್ಜೆಯ ಯಾವುದೇ ಕಾಗದದಲ್ಲಿಯೂ ಬರೆಯಬಹುದು.

    ಉಯಿಲಿನ ಪ್ರತಿಪುಟದ ಮೇಲೆ ಉಯಿಲು ಕರ್ತನು ತನ್ನ ಸಹಿಯನ್ನು ಮಾಡಬೇಕು ಅಥವಾ ಹೆಬ್ಬೆರಳಿನ ಗುರುತನ್ನು ಹಾಕಬೇಕು. ಉಯಿಲು ದಸ್ತಾವೇಜಿಗೆ ಕನಿಷ್ಠ ಇಬ್ಬರು ವ್ಯಕ್ತಿಗಳು ‘ಸಾಕ್ಷಿಗಳೆಂದು’ (Witness) ಉಯಿಲು ಕರ್ತನು ಅದಕ್ಕೆ ಸಹಿ ಮಾಡಿದ್ದನ್ನು ಪ್ರತ್ಯಕ್ಷ ಕಂಡು ಸಹಿ ಮಾಡಬೇಕು.
    ಬಿಕ್ಕಲಂ (Document Writer) ಬರಹಗಾರ ‘ಸಾಕ್ಷಿ’ ಆಗುವುದಿಲ್ಲ.(ಉಯಿಲು ದಾಖಲೆ ಪತ್ರ ಬರೆದ ವ್ಯಕ್ತಿ Deed writer)


    Provided by
    Provided by
    Provided by

    ಉಯಿಲಿನ ಮೂಲಕ ಯಾವುದೇ ವಿಧದ ಪ್ರಯೋಜನವನ್ನು ಪಡೆಯುವ ವ್ಯಕ್ತಿ ( Beneficiary Of the will ) ಉಯಿಲಿಗೆ ಸಾಕ್ಷಿ ಹಾಕಬಾರದು. ಹಾಗೊಂದು ವೇಳೆ ಸಾಕ್ಷಿ ಹಾಕಿದಲ್ಲಿ, ಸಾಕ್ಷಿ ಹಾಕಿದ್ದು ಅನೂರ್ಜಿತವಾಗುವುದಿಲ್ಲ. ಆದರೆ ಸಾಕ್ಷಿ ಹಾಕಿದ ವ್ಯಕ್ತಿ ಅಥವಾ ಆತನ/ಆಕೆಯ ಹೆಂಡತಿ ಅಥವಾ ಗಂಡ ಉಯಿಲು ಮೂಲಕ ಪಡೆದ ಪ್ರಯೋಜನ ರದ್ದಾಗುವ ಸಂಭವವಿರುತ್ತದೆ.
    ಉಯಿಲಿನಲ್ಲಿ ತೋರಿಸಿದ ಆಸ್ತಿಗಳ ಮತ್ತು ಅವುಗಳನ್ನು ಪಡೆಯುವ ವ್ಯಕ್ತಿಗಳ ವಿವರಗಳನ್ನು ಯಾವುದೇ ಸಂದಿಗ್ಧತೆ ಅಥವಾ ಅಸ್ಪಷ್ಟತೆಗೆ ಅವಕಾಶವಿಲ್ಲದಂತೆ ಸ್ಪಷ್ಟವಾಗಿ ಮತ್ತು ಸರಿಯಾಗಿ ನಮೂದಿಸಬೇಕು.

    ಯಾವ ವಿಧದ ಆಸ್ತಿಗಳನ್ನು ಉಯಿಲನ್ನು ,(ಮೃತ್ಯು ಪತ್ರ) ಮಾಡಬಹುದು?

    ಉಯಿಲು ಕರ್ತನು ಯಾವ ಆಸ್ತಿಗಳಿಗೆ ಸಂಬಂಧಿಸಿದಂತೆ ಉಯಿಲು ಮಾಡಲು ಇಚ್ಚಿಸುತ್ತಾನೆಯೋ ಅಂತಹ ಆಸ್ತಿಗಳನ್ನು ತನ್ನ ಜೀವಿತಾವಧಿಯಲ್ಲಿ ವಿಲೇವಾರಿ ಮಾಡುವ ಸಂಪೂರ್ಣ ಹಕ್ಕನ್ನು ಹೊಂದಿರಬೇಕು.
    ಒಬ್ಬ ಹಿಂದೂ ತನ್ನ ಸ್ವಯಾರ್ಜಿತ ವಾದ ಸಂಪೂರ್ಣ ಆಸ್ತಿಯನ್ನು ,ಒಬ್ಬ ಹಿಂದೂ ಮಹಿಳೆ ತನ್ನ ಜೀವಿತ ಸಮಯದಲ್ಲಿ ಯಾವ ಆಸ್ತಿಯನ್ನು ತನ್ನ ಇಚ್ಛಾನುಸಾರ ಪರಭಾರೆ (ವಿಲೇವಾರಿ) ಮಾಡುವ ಹಕ್ಕನ್ನು ಹೊಂದಿರುತ್ತಾಳೋ ಅಂತಹ ಆಸ್ತಿಯನ್ನು ,ಹಿಂದು ಅವಿಭಕ್ತ (ಏಕತ್ರ ,ಒಟ್ಟು ) ಕುಟುಂಬದ ಸದಸ್ಯನೊಬ್ಬನ ಕುಟುಂಬದ ಆಸ್ತಿ ವಿಭಾಗವಾದಲ್ಲಿ ತನ್ನ ಪಾಲಿಗೆ ಬರುವಷ್ಟು ಆಸ್ತಿಯನ್ನು ,ಒಬ್ಬ ಮಹಮ್ಮದೀಯನು ತನ್ನ ಒಟ್ಟು ಆಸ್ತಿಯ ಮೂರನೇ ಒಂದು ಭಾಗಕ್ಕೆ ಸಂಬಂಧಿಸಿದಂತೆ ,ಉಯಿಲನ್ನು ಮಾಡುವ ಹಕ್ಕುಳ್ಳವರಾಗಿರುತ್ತಾರೆ. ಉಯಿಲು ಮಾಡಿದ್ದರಿಂದಾಗಿ ಉಯಿಲುಕರ್ತನು(ವಿಲ್ ಬರೆಯುವವನು) ತನ್ನ ಆಸ್ತಿಯ ಮೇಲಿನ ಹಕ್ಕನ್ನು ಎಳ್ಳಷ್ಟೂ ಕಳೆದುಕೊಳ್ಳುವುದಿಲ್ಲ.

    ಉಯಿಲು ನಿರ್ವಾಹಕ (EXECUTOR)

    ಉಯಿಲಿನಲ್ಲಿರುವ ನಿರ್ದೇಶನಗಳಂತೆ ಆಸ್ತಿಗಳ ವಿತರಣೆ ಅಥವಾ ವಿಲೇವಾರಿ ಮಾಡಲೆಂದು ಉಯಿಲು ಕರ್ತನು ತನ್ನ ಉಯಿಲಿನಲ್ಲಿ ಒಬ್ಬ (Executor) ಉಯಿಲು ನಿರ್ವಾಹಕನನ್ನು ಅಥವಾ ಒಬ್ಬನಿಗಿಂತ ಹೆಚ್ಚು ನಿರ್ವಾಹಕರನ್ನು ನೇಮಿಸಿಕೊಳ್ಳಲು ಅವಕಾಶವಿದೆ.

    ಉಯಿಲನ್ನು ನೊಂದಣಿ (Registration) ಮಾಡಿಸುವುದು ಕಡ್ಡಾಯವಲ್ಲ. ಆದರೆ ನೊಂದಾಯಿತ ಉಯಿಲಿನ ಬಗ್ಗೆ ಅನುಮಾನ ಬಹುಮಟ್ಟಿಗೆ ಕಡಿಮೆಯಾಗುತ್ತದೆ. ಅಲ್ಲದೆ ಉಯಿಲಿನ ಮೂಲಪ್ರತಿ ಕಳೆದುಹೋದ ಸಂದರ್ಭದಲ್ಲಿ ಅದರ ದೃಡೀಕೃತ ನಕಲನ್ನು ಪಡೆದು ಜಾರಿಗೆ ತರಲು ಧನಾತ್ಮಕ ಅವಕಾಶವನ್ನು ಕಲ್ಪಿಸುತ್ತದೆ.

    ಉಯಿಲನ್ನು ಭದ್ರತೆ:

    ಉಯಿಲುಕರ್ತನು ತನ್ನ ಉಯಿಲನ್ನು ತನ್ನಲ್ಲಿಯೇ ಇರಿಸಿಕೊಳ್ಳಬಹುದು; ಅಥವಾ ತನ್ನ ಯಾವುದೇ ವಿಶ್ವಾಸಿಕರ ಹತ್ತಿರವಾಗಲೀ, ಅಥವಾ ಮೊಹರು ಮಾಡಿದ ಲಕೋಟೆಯೊಳಗೆ ಇಟ್ಟು ನೋಂದಣಾಧಿಕಾರಿ ಕಛೇರಿಯಲ್ಲಾಗಲಿ ಭದ್ರವಾಗಿಡಬಹುದು.

    ಉಯಿಲು ಕರ್ತನು ಮೃತಪಟ್ಟಲ್ಲಿ ಆತನಿಗೆ ಸಂಬಂಧಿಸಿದವರು ನೋಂದಣಾಧಿಕಾರಿಗೆ ಅರ್ಜಿ ಸಲ್ಲಿಸಿ ಭದ್ರವಾಗಿಟ್ಟ ಉಯಿಲಿನ ಧೃಢೀಕೃತ ನಕಲನ್ನು ನೋಂದಣಾಧಿಕಾರಿಯವರಿಂದ ಪಡೆದುಕೊಳ್ಳಬಹುದು.ಭದ್ರವಾಗಿಟ್ಟ ಉಯಿಲನ್ನು ಅದರ ಕರ್ತನು ಬಯಸಿದಾಗ ಹಿಂದಕ್ಕೆ ಪಡೆಯಬಹುದು.

    ಉಯಿಲಿನ ತಿದ್ದುಪಡಿ:

    ಉಯಿಲನ್ನು ಮಾಡಿದ ನಂತರ ಉಯಿಲುಕರ್ತನು ತನ್ನ ಜೀವಿತದ ಅವಧಿಯಲ್ಲಿ ಈ ಉಯಿಲಿಗೆ ಯಾವುದೇ ರೀತಿಯಲ್ಲಿ ತಿದ್ದುಪಡಿಯನ್ನು ತರುವ ಹಕ್ಕನ್ನು ಹೊಂದಿರುತ್ತಾನೆ. ಆತನು ಬೇರೆಯದೇ ಆದ ಮತ್ತೊಂದು ದಸ್ತಾವೇಜನ್ನು ಬರೆದು ತಿದ್ದುಪಡಿ ಮಾಡಬೇಕಾಗುತ್ತದೆ. ಈ ದಸ್ತಾವೇಜಿಗೆ ಉಯಿಲಿನ ಅನುಬಂಧ ಅಥವಾ ಕೊಡಿಸಿಲ್ ಎಂದು ಕರೆಯಲಾಗುತ್ತದೆ.ಉಯಿಲು ನೋಂದಾಯಿಸಿದ ಉಯಿಲಾಗಿದ್ದರೆ ಅದಕ್ಕೆ ತಿದ್ದುಪಡಿ ತರುವ ಅನುಬಂಧ ಅಥವಾ ಕೊಡಿಸಿಲ್ ಅನ್ನು ಸಹ ನೋಂದಣಿ ಮಾಡಬೇಕಾಗುತ್ತದೆ.ಮೂಲ ಉಯಿಲನ್ನು ಬರೆಯುವಾಗ ಪಾಲಿಸಬೇಕಾದದ್ದೆಲ್ಲವನ್ನು ಅನುಬಂಧವನ್ನು ಬರೆಯುವಾಗಲೂ ಸಹ ಪಾಲಿಸಬೇಕಾಗುತ್ತದೆ.

    ಮೃತ್ಯು ಪತ್ರವನ್ನು (ಉಯಿಲು) ರದ್ದುಗೊಳಿಸುವುದು ಹೇಗೆ?

    ಮೂಲ ಉಯಿಲು ನೋಂದಾಣಿ ಉಯಿಲಾಗಿದ್ದರೆ ಮತ್ತೊಂದು ಉಯಿಲನ್ನು ಬರೆದು ಅದರಲ್ಲಿ ಮೊದಲನೇ ಉಯಿಲನ್ನು ರದ್ದುಗೊಳಿಸಿರುವುದಾಗಿ ಘೋಷಿಸುವ ಮೂಲಕ ಮೂಲ ಉಯಿಲನ್ನು ರದ್ದುಗೊಳಿಸಬಹುದು.ನೋಂದಾಣಿ ಮಾಡಲಾದ ಉಯಿಲನ್ನು ರದ್ದಿತಿ ಪತ್ರವನ್ನು ಮಾಡಿಸಿ ಆ ಪತ್ರವನ್ನು ನೊಂದಾಯಿಸುವ ಮೂಲಕವೂ ರದ್ದುಗೊಳಿಸಬಹುದು.ರದ್ದು ಪಡಿಸಲಾದ ಉಯಿಲಿನ ಪುನರುಜ್ಜೀವನ ಒಮ್ಮೆ ರದ್ದುಪಡಿಸಿದ ಉಯಿಲನ್ನು ಪುನರುಜ್ಜೀವನಗೊಳಿಸಲಾಗದು. ಆದರೆ ಉಯಿಲಿನಲ್ಲಿಯ ಅಂಶಗಳನ್ನೇ ಅಳವಡಿಸಿ ಮತ್ತೊಂದು ಉಯಿಲನ್ನು ಹೊಸತಾಗಿ ಬರೆಯಬಹುದು.

    ಉಯಿಲು ಮತ್ತು ಪ್ರೋಬೆಟ್:

    ಒಂದು ಉಯಿಲು ನಿಸ್ಸಂದೇಹವಾಗಿ ಸಾಚಾ ಉಯಿಲು (Genuine Will) ಎಂದು ನ್ಯಾಯಾಲಯದಲ್ಲಿ ರುಜುವಾತುಪಡಿಸಿ ಪಡೆಯುವ ಉಯಿಲಿನ ಪ್ರಮಾಣಿತ ಪ್ರತಿಗೆ ಪ್ರೊಬೇಟ್ ಎನ್ನುತ್ತಾರೆ.

    ಪ್ರೋಬೆಟ್ ಅನ್ನು ನ್ಯಾಯಾಲಯವು ವಿವರವಾಗಿ ವಿಚಾರಣೆ ನಡೆಸಿದ ನಂತರವೇ ಕೊಡು ಮಾಡುವುದರಿಂದ ಉಯಿಲು ಸಂಶಯಾತೀತವಾಗುತ್ತದಲ್ಲದೆ ಅದರ ಸಿಂಧುತ್ವವನ್ನು ಯಾರೂ ಪ್ರಶ್ನಿಸುವಂತಿಲ್ಲ. ಉಯಿಲಿನ ಜಾರಿಗಾಗಿ ಅದರಲ್ಲಿ ನಿರ್ವಾಹಕನನ್ನು ನೇಮಿಸಿದಲ್ಲಿ ಆತನು ಪ್ರೋಬೆಟನ್ನು ಪಡೆಯಬೇಕಾಗುತ್ತದೆ.

    ಪ್ರೋಬೆಟ್ ಗಾಗಿ ಅರ್ಜಿ ಸಲ್ಲಿಸಲು ಯಾವುದೇ ಕಾಲ ಪರಿಮಿತಿ ಇರುವುದಿಲ್ಲ.

    -ಮರಿಗೌಡ ಬಾದರದಿನ್ನಿ
    ವಕೀಲರು & ಪತ್ರಕರ್ತರು

    admin
    • Website

    Related Posts

    ಬೆಳಕಿನ ವೇಗದ ಬಗ್ಗೆ ಒಂದು ಸಣ್ಣ ಆತ್ಮಾವಲೋಕನ

    August 13, 2025

    ನಾಶವಾಗ್ತಿದೆ ಮಿಂಚುಹುಳ ಸಂತತಿ!

    July 23, 2025

    ನಿಜವಾದ ದಾನಿ

    April 4, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ಬೆಳಗಾವಿ: ಡಿಸೆಂಬರ್ 31 ರ ಮೊದಲು ಸರ್ಕಾರವು ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಚಿಕ್ಕೋಡಿ ಜಿಲ್ಲೆಯನ್ನು ರಚಿಸುವುದಾಗಿ ಮಹಿಳಾ ಮತ್ತು…

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.