ಬೆಂಗಳೂರು: ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಇದ್ದರೆ ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ತಮ್ಮ ಸರ್ಕಾರಿ ನಿವಾಸದ ಬಳಿ ಬಿ.ಆರ್.ಪಾಟೀಲ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಡವರ ಮನೆಯ ಹಣ ಪಡೆಯುವಷ್ಟು ದರಿದ್ರ ನನಗೆ ಬಂದಿಲ್ಲ ಎಂದಿದ್ದಾರೆ.
ಬಿ.ಆರ್.ಪಾಟೀಲ್ ನನ್ನ ಮೇಲೆ ಆರೋಪ ಮಾಡಿಲ್ಲ. ನಾನು ಕೊಟ್ಟ ಪತ್ರಕ್ಕೆ ಮನೆ ಕೊಟ್ಟಿಲ್ಲ ಎಂದಿದ್ದಾರೆ. ಪಂಚಾಯತಿ ಮೇಲೆ ಆರೋಪ ಮಾಡಿದ್ದಾರೆ. ಪ್ರತಿ ಪಂಚಾಯತಿಗೆ 900 ಮನೆ ನೀಡಲಾಗಿದೆ. ಎರಡು ಸಾವಿರ ಮನೆ ಕೇಳಿದ್ರೆ 900 ಮನೆ ನೀಡಲಾಗಿದೆ. ಶಾಸಕರು ಕೊಟ್ಟ ಮನವಿ ನಮ್ಮ ಬಳಿ ಇವೆ. ಬಿ.ಆರ್.ಪಾಟೀಲ್ ಹಿರಿಯರಿದ್ದಾರೆ. ಯಾಕೆ ಆರೋಪ ಮಾಡಿದ್ರೋ ಗೊತ್ತಿಲ್ಲ ಎಂದರು.
ಬಿಜೆಪಿಗರು ಹೇಳುವುದೇ ಬೇಡ ನಾನೇ ರಾಜೀನಾಮೆ ನೀಡುತ್ತೇನೆ. ಯಾರ ಬಳಿಯೂ ನಾವು ದುಡ್ಡು ಪಡೆದು ಮನೆ ಕೊಟ್ಟಿಲ್ಲ. ರಾಮನಗರಕ್ಕೆ ಕೂಡ ಮನೆ ಕೊಟ್ಟಿದ್ದೇವೆ. ಎಲ್ಲರಿಗೂ ಮನೆ ಕೊಟ್ಟಿದ್ದೇವೆ. ದುಡ್ಡು ಪಡೆದು ಮನೆ ಕೊಟ್ಟರೆ ಹುಳ ಬಿದ್ದು ಸಾಯುತ್ತೇವೆ. ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆಯದಾಗುತ್ತಾ?. ಯಾರು ಹಣ ಪಡೆದಿದ್ದಾರೆ ಎಂದು ಪಾಟೀಲ್ ಹೇಳಲಿ. ಅವರ ಮೇಲೆ ಕ್ರಮ ತೆಗೆದುಕೊಳ್ಳೋಣ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW