nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಣ ಸಚಿವರಿಗೆ ಹೀನಾಯ ಸೋಲು | ತಿಪಟೂರಿಗೆ ಮತ್ತೆ ಮಂತ್ರಿಭಾಗ್ಯ ಸಿಗುವುದೇ?
    ತಿಪಟೂರು May 14, 2023

    ಶಿಕ್ಷಣ ಸಚಿವರಿಗೆ ಹೀನಾಯ ಸೋಲು | ತಿಪಟೂರಿಗೆ ಮತ್ತೆ ಮಂತ್ರಿಭಾಗ್ಯ ಸಿಗುವುದೇ?

    By adminMay 14, 2023No Comments2 Mins Read
    shadakshari
    • ಆನಂದ್, ತಿಪಟೂರು

    ತಿಪಟೂರು: ತೀರ್ವ ಕುತೂಹಲ ಕೆರಳಿಸಿದ್ದ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಕಾಂಗ್ರೆಸ್‌ ನ ಕೆ.ಷಡಕ್ಷರಿ 17662 ಮತಗಳ ಅಂತರದಿಂದ ಜಯಗಳಿಸಿದ್ದು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.

    ಈ ಬಾರಿಯ ವಿಧಾನಸಭಾ ಚುನಾವಣಾ ಕಣದಲ್ಲಿ ತಿಪಟೂರು ಕ್ಷೇತ್ರದಿಂದ ಒಟ್ಟು 12 ಜನರು ಅಭ್ಯರ್ಥಿಗಳೂ ಇದ್ದರು ಇವರಲ್ಲಿ ಕೆ.ಷಡಕ್ಷರಿ ಕಾಂಗ್ರೆಸ್‌ ನಿಂದ ಸ್ಪರ್ಧಿಸಿ 71415 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಶಿಕ್ಷಣ ಸಚಿವ ನಾಗೇಶ್ ವಿರುದ್ದ 17662 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ.


    Provided by
    Provided by

    ಚುನಾವಣೆ ಪ್ರಾರಂಭವಾದಾಗಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ಜೋರಾಗಿಯೇ ಸಾಗುತ್ತಿತ್ತು. ಚುನಾವಣೆಗೆ ಕೆಲವೇ ದಿನಗಳಿರುವ ಸಂದರ್ಭದಲ್ಲಿ ನೀಲಕಂಠಸ್ವಾಮಿ ವೃತ್ತದಲ್ಲಿ ಜಗಜ್ಯೋತಿ ಬಸವೇಶ್ವರ ಪುತ್ತಳಿ ಸ್ಥಾಪನೆ ವಿಚಾರವಾಗಿ ನಡೆದ ಸಂಭಾಷಣೆಯ ಸಂಪೂರ್ಣ ಲಾಭ ಮತ್ತು ಕಳೆದ ಬಾರಿ ಶೋಭಾ ಕರಂದ್ಲಾಜೆ ಭಾಷಣ ಮಾಡುವಾಗ ಬಿ.ಸಿ.ನಾಗೇಶ್ ಯಡಿಯೂರಪ್ಪನವರ ಬಲದಿಂದ ಗೆದ್ದು ಅನಂತಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಮತಚಲಾಯಿಸಿದ್ದರು ಎಂಬ ವಿಡಿಯೋ ಲಿಂಗಾಯತರನ್ನು ಕೆರಳಿಸಿತ್ತು. ಇದರ ಪರಿಣಾಮವಾಗಿ ನಾಗೇಶ್ ಸೋಲನುಭವಿಸಿದ್ದಾರೆ ಎನ್ನುವ ಚರ್ಚೆ ಕೇಳಿ ಬಂದಿದೆ.

    ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿ.ಜೆ.ಪಿ ಚುನಾವಣೆಯಾಗಿ ಕಂಡುಬಂದಿದ್ದು ಉಳಿದ ಅಭ್ಯರ್ಥಿಗಳು 500 ಮತಗಳನ್ನು ಪಡೆಯಲು ವಿಫಲವಾಗಿದ್ದು, 640 ಮತಗಳನ್ನು ಪಡೆದ ಆಪ್‌ ನ ಚಂದ್ರಶೇಖರ್ 4ನೇ ಸ್ಥಾನವನ್ನು, 5ನೇ ಸ್ಥಾನವನ್ನು 635 ಮತಗಳನ್ನು ಪಡೆದ ನೋಟಾ ಪಡೆದುಕೊಂಡಿದ್ದು ಕಳೆದ ಬಾರಿ 3000ಕ್ಕೂ ಹೆಚ್ಚು ಮತಗಳನ್ನು ಪಡೆದು ಗಮನ ಸೆಳೆದಿದ್ದ ಪಕ್ಷೇತರ ಅಭ್ಯರ್ಥಿ ಕುಮಾರಸ್ವಾಮಿ 468 ಮತಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ.

    ಜೋಡೆತ್ತುಗಳ ಪಟ್ಟಿಗೆ ತತ್ತರಿಸಿದ ಶಿಕ್ಷಣ ಸಚಿವ :

    ಕಾಂಗ್ರೆಸ್ ಪಕ್ಷದಲ್ಲಿ ಕೆ.ಷಡಕ್ಷರಿ ಅವರಿಗೆ ಟಿಕೆಟ್ ಘೋಷಣೆಯಾದ ಮೇಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಲೋಕೇಶ್ವರ್, ಷಡಕ್ಷರಿ ಅವರಿಗೆ ಬೆಂಬಲ ಘೋಷಿಸಿ ಕಾರ್ಯಾಚರಣೆಗೆ ಇಳಿದ ಮೇಲೆ ಕಾಂಗ್ರೆಸ್ ಬಲ ಹೆಚ್ಚಾಗುತ್ತಾ ಸಾಗಿತು. ಕೆ.ಷಡಕ್ಷರಿ ಮತ್ತು ಲೋಕೇಶ್ವರ್ ಎಂಬ ಜೋಡೆತ್ತುಗಳ ಕಾರ್ಯತಂತ್ರ ಮತ್ತು ಹೆಚ್ಚಿನದಾಗಿ ಕಳೆದ ಚುನಾವಣೆಗಳ್ಳಿ ಸಾಮಾಜಿಕ ಜಾಲತಾಣವನ್ನು ಹೇಗೆ ಬಳಸಿಕೊಳ್ಳಬೇಕೆಂಬುದನ್ನು ಕಲಿತ ಇವರಿಬ್ಬರು ನಾಗೇಶ್‌ರ ತಪ್ಪುಗಳನ್ನು ಸಾಮಾಜಿಕ ಜಾಲತಣಾದಲ್ಲಿ ಪ್ರಚಾರಕ್ಕೆ ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿಯೇ ಅರ್ಧಮತಗಳನ್ನು ಪರಿವರ್ತಿಸಿಕೊಂಡು ಶಿಕ್ಷಣ ಸಚಿವರಿಗೆ ಸಾಮಾಜಿಕ ಜಾಲತಾಣವನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ಪಾಠಮಾಡಿ ಸೋಲಿನ ಪಾಠಕಲಿಸಿದ್ದಾರೆ.

    ತಿಪಟೂರಿಗೆ ಮತ್ತೆ ಮಂತ್ರಿಭಾಗ್ಯ ಸಿಗುವುದೇ?:ಕಳೆದ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗ ಸಚಿವ ಸ್ಥಾನದ ಅಂಚಿನಲ್ಲಿದ್ದು ಕಾರಣಾಂತರದಿಂದ ಸಚಿವಸ್ಥಾನದಿಂದ ವಂಚಿತರಾಗಿದ್ದ ಕೆ.ಷಡಕ್ಷರಿಯವರಿಗೆ ಈ ಬಾರಿ ಮಂತ್ರಿ ಭಾಗ್ಯ ದೊರೆಯುವ ಸಾಧ್ಯತೆ ಹೆಚ್ಚಾಗಿದೆ.

    ತಾಲ್ಲೂಕಿನಲ್ಲಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮವನ್ನು ಆಚರಿಸುತ್ತಿದ್ದರೆ, ಬಿ.ಜೆ.ಪಿಯ ಬೆಂಬಲಿಗರಲ್ಲಿ ಮಾತ್ರ ಸೂತಕ ಛಾಯೆ ಆವರಿಸಿದೆ. ಆದರೆ ಚುನಾವಣೆ ಮುಗಿಯುತು ಇನ್ನೇನಿದ್ದರು ಎಲ್ಲರೂ ಅಣ್ಣ-ತಮ್ಮಂದಿರು ಎಂಬ ಭಾವನೆಯಲ್ಲಿ ತಿಪಟೂರನ್ನು ಜಿಲ್ಲೆಯನ್ನಾಗಿಸಿ ಅಭಿವೃದ್ಧಿಗಾಗಿ ಪಕ್ಷಭೇದ ಬಿಟ್ಟು ದುಡಿಯೋಣ ಎಂದು ಸಾಗಬೇಕಿದೆ.


     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.