ಬೆಂಗಳೂರು: ಬೆಂಗಳೂರಿನ ಸಿವಿ ರಾಮನ್ ನಗರದ, ಗೋಪಾಲನ್ ಗ್ರ್ಯಾಂಡ್ ಮಾಲ್ ಬಳಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದರು. ಕಾರು, ಬೈಕಿನ ನಡುವೆ ಡಿಕ್ಕಿಯಾಗಿದ್ದರಿಂದ ಈ ಘಟನೆ ನಡೆದಿದ್ದು, ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುಖಕ್ಕೆ ರಕ್ತ ಬರಿಸಿಕೊಂಡು ಅವರು ವಿಡಿಯೋ ಪೋಸ್ಟ್ ಮಾಡಿದ್ದರು.
ಈ ವಿಡಿಯೋದ ಆಧಾರದಲ್ಲಿ ಪೊಲೀಸರು ಯುವಕನ ವಿರುದ್ಧ ಎಫ್ ಐಆರ್ ದಖಲಿಸಿಕೊಂಡು ವಶಕ್ಕೆ ಪಡೆದುಕೊಂಡಿದ್ದರು. ಆದರೆ ಇದೀಗ ಸಿಸಿ ಕ್ಯಾಮರಾ ದೃಶ್ಯಾವಳಿಗಳಿಂದ ಸತ್ಯಾಂಶ ಬಯಲಾಗಿದೆ.
ಸಿಸಿ ಟಿವಿ ದೃಶ್ಯದಲ್ಲಿ ಯುವಕ ಹಲ್ಲೆ ಮಾಡಿಲ್ಲ, ಬದಲಾಗಿ ವಿಂಗ್ ಕಮಾಂಡರ್ ಬೋಸ್ ಯುವಕನ ಮೇಲೆ ರೌದ್ರಾವತಾರ ತಾಳಿ ಭೀಕರವಾಗಿ ದಾಳಿ ನಡೆಸುತ್ತಿರುವುದು ಕಂಡು ಬಂದಿದೆ. ಸ್ಥಳೀಯರು ಎಷ್ಟೇ ಬಿಡಿಸಲು ಮುಂದಾದರೂ ಯುವಕನ ಮೇಲೆ ಮಾರಕ ದಾಳಿ ನಡೆಸಿದ್ದ ವಿಂಗ್ ಕಮಾಂಡರ್ ಬೋಸ್, ಯುವಕ ನೆಲಕ್ಕೆ ಬಿದ್ದರೂ ಆತನನ್ನು ಬಿಡದೇ ಕ್ರೂರವಾಗಿ ಆತನ ಮೇಲೆ ಎರಗಿರುವುದು ಕಂಡು ಬಂದಿದೆ.
ಯುವಕನ ಮೇಲೆ ಮಾರಕ ದಾಳಿ ನಡೆಸಿದ್ದಲ್ಲದೇ, ಬೆಂಗಳೂರು ಸೇಫ್ ಅಲ್ಲ ಎಂದು ಬಿಂಬಿಸಲು ವಿಂಗ್ ಕಮಾಂಡ್ ಬೋಸ್ ಮುಂದಾಗಿರುವುದು ಇದೀಗ ಬೆಂಗಳೂರಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕೇಸ್ ದಾಖಲು
ಬೆಂಗಳೂರಿನಲ್ಲಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮತ್ತು ಟೆಕ್ಕಿ ವಿಕಾಸ್ ಕುಮಾರ್ ನಡುವೆ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಕ್ಕಿ ವಿಕಾಸ್ ಕುಮಾರ್ ನೀಡಿದ ದೂರಿನ ಹಾಗೂ ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ, ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧವೇ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ, ಎಫ್ ಐಆರ್ ನಲ್ಲಿ ಅವರ ಹೆಸರು ಉಲ್ಲೇಖ ಮಾಡಿಲ್ಲ ಎಂದು ವಿಕಾಸ್ ಪರ ವಕೀಲ ಅಜಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಅವರನ್ನು ಬಂಧಿಸಬೇಕು ಅಂತ ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW