nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    • ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಿಂಗಸಮಾನತೆಯಿಂದ ಮಾತ್ರ ಸ್ತ್ರೀಸಬಲೀಕರಣ ಸಾಧ್ಯ: ಡಾ.ಆಶ್ವಾಖ್ ಅಹಮದ್
    ಮಧುಗಿರಿ April 17, 2025

    ಲಿಂಗಸಮಾನತೆಯಿಂದ ಮಾತ್ರ ಸ್ತ್ರೀಸಬಲೀಕರಣ ಸಾಧ್ಯ: ಡಾ.ಆಶ್ವಾಖ್ ಅಹಮದ್

    By adminApril 17, 2025No Comments2 Mins Read
    madhugiri college

    ಮಧುಗಿರಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಧುಗಿರಿ ಮತ್ತು ಸಮಾಜಶಾಸ್ತ್ರ ವಿಭಾಗ ಹಾಗು ಐ.ಕ್ಯೂ.ಎ.ಸಿ. ಇವುಗಳ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದಿತು.

    ಕಾರ್ಯಕ್ರಮದಲ್ಲಿ ಡಾ.ಆಶ್ವಾಖ್ ಅಹಮದ್, ಸಹ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಸಮಾಜಶಾಸ್ತ್ರ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಇವರು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ “ಲಿಂಗತಾರತಮ್ಯ ಮತ್ತು ಸ್ತ್ರೀ ಸಬಲೀಕರಣ: ಸಮಸ್ಯೆಗಳು ಮತ್ತು ಸವಾಲುಗಳು” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳನ್ನು ಉದ್ಧೇಶಿಸಿ ಮಾತನಾಡುತ್ತಾ ಲಿಂಗಸಮಾನತೆಯಿಂದ ಮಾತ್ರ ಸ್ತ್ರೀಸಬಲೀಕರಣ ಸಾಧ್ಯ, ಲಿಂಗತಾರತಮ್ಯವು ಒಂದು ಸಮಸ್ಯೆಯಾದರೆ ಸ್ತ್ರೀಸಬಲೀಕರಣವು ಈ ಸಮಸ್ಯೆಯ ಪರಿಹಾರವಾಗಿದೆ. ನಿರ್ದೆಷ್ಟ ಲಿಂಗ ಎನ್ನುವ ಕಾರಣಕ್ಕೆ ವ್ಯಕ್ತಿಯ ಹಕ್ಕುಗಳು ಮತ್ತು ಅವಕಾಶಗಳನ್ನು ನಿರಾಕರಿಸುವುದೆ ಲಿಂಗ ಅಸಮಾನತೆಯಾಗಿದೆ. ಲಿಂಗತಾರತಮ್ಯ ನಿವಾರಣೆಯಾದರೆ ಮಾತ್ರ ಸಾಮಾಜಿಕ ಆರ್ಥಿಕ ಅಭಿವೃದ್ಧಿ ಸಾಧ್ಯ ಲಿಂಗತಾರತಮ್ಯವು ಸ್ತ್ರೀಸಬಲೀಕರಣಕ್ಕೆ ಸವಾಲನ್ನೋಡ್ಡುತ್ತಿದ್ದು ಲಿಂಗತಾರತಮ್ಯಕ್ಕೆ ಜೈವಿಕ ಅಂಶ ಕಾರಣವಾಗುವುದರ ಜೊತೆಗೆ ಮಾನಸಿಕ, ಸಾಮಾಜಿಕ ಅಂಶಗಳು ಕಾರಣವಾಗುತ್ತವೆ. ಸಮಾಜದಲ್ಲಿ ಲಿಂಗತಾರತಮ್ಯಕ್ಕೆ ಕಡಿವಾಣ ಹಾಕಬೇಕಾದರೆ ಜನರ ಮಾನಸಿಕ, ಸಾಮಾಜಿಕ ಅಂಶಗಳಲ್ಲಿ ಬದಲಾವಣೆಯಾಗಬೇಕಾಗುತ್ತದೆ. ಸ್ತ್ರೀ ಸಬಲೀಕರಣ ಕುಟುಂಬದಿಂದಲೇ ಪ್ರಾರಂಭವಾಗಬೇಕು, ತಾಯಿಯ ಪಾತ್ರ ಮುಖ್ಯವಾಗಿರುತ್ತದೆ. ಮಹಿಳೆಯರ ಹಕ್ಕನ್ನು ಗೌರವಿಸಬೇಕಾಗುತ್ತದೆ. ಗಂಡು ಮಕ್ಕಳಿಗೆ ಉತ್ತಮ ಸಾಮಾಜಿಕರಣದ ಮೂಲಕ ಬೆಳಸಬೇಕಾಗುತ್ತದೆ, ಸ್ತ್ರೀಯರಿಗೆ ಶಿಕ್ಷಣ, ಉದ್ಯೋಗ, ಆರ್ಥಿಕ ಸ್ವಾತಂತ್ರ್ಯ, ರಾಜಕೀಯ ಸಹಭಾಗಿತ್ವ ನಿರ್ಧಾರದ ಹಕ್ಕು ನೀಡಿ ಸಬಲೀಕರಣ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಡಾ.ವಿಜಯಲಕ್ಷ್ಮೀ ಎನ್., ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಧುಗಿರಿರವರು ಇಂದು ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ಉತ್ತಮ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಇದು ಉಪಯುಕ್ತ ಕಾರ್ಯಕ್ರಮವಾಗಿದೆ. ಲಿಂಗತಾರತಮ್ಯತೆ, ಅಸಮಾನತೆ ಹಾಗೂ ಇನ್ನಿತರ ಬಗೆಯ ಸಂಕಷ್ಟಗಳಿಗೆ ಒಳಗಾಗಿರುವ ಸ್ತ್ರೀಯರಿಗೂ ಕೂಡ ಪುರುಷರಿಗೆ ಸರಿಸಮಾನವಾದ ಅಂತಸ್ತು ಹಾಗೂ ಅವಕಾಶಗಳನ್ನು ನೀಡ ಸ್ತ್ರೀಯರನ್ನು ಸಶಕ್ತರನ್ನಾಗಿಸಬೇಕಾದ ಅನಿವಾರ್ಯತೆ ಇದೆ. ಸ್ತ್ರೀಯರು ಸ್ವಸಾಮರ್ಥ್ಯವನ್ನು ಬಳಸಿ ಶಕ್ತಿಯುತವಾಗಿ ಹೊರಹೊಮ್ಮಿ ಸಮಾಜದಲ್ಲಿ ಉತ್ತಮ ಸಾಧನೆ ಮಾಡುವುದರ ಮೂಲಕ ಈ ಸ್ಪರ್ಧಾತ್ಮಕ ಸಮಾಜದಲ್ಲಿ ಯಾವುದಕ್ಕೂ ಕಡಿಮೆ ಇಲ್ಲದಂತೆ ಬೆಳೆದು ಸಮಸಮಾಜದ ನಿರ್ಮಾಣಕ್ಕೆ ನಾಂದಿ ಹಾಡಬೇಕೆಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದ ಅಧ್ಯಕತೆಯನ್ನು ವಹಿಸಿದ್ದ ಪ್ರಭಾರ ಪ್ರಾಚಾರ್ಯರಾದ ಡಾ.ಶಂಕರ ಲಿಂಗಯ್ಯ ಎಂ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ,  ಸಮಾಜಶಾಸ್ತ್ರ ವಿಭಾಗವು ವಿದ್ಯಾರ್ಥಿಗಳಿಗೆ ಉತ್ತಮ ಕಾರ್ಯಕ್ರಮವನ್ನು ರೂಪಿಸಿದೆ. ಲಿಂಗತಾರತಮ್ಯತೆ ಮತ್ತು ಸ್ತ್ರೀಸಬಲೀಕರಣ ಸಮಾಜದಲ್ಲಿ ಕಂಡುಬರುತ್ತವೆ. ಲಿಂಗತಾರತಮ್ಯತೆ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗುವುದಿಲ್ಲ. ಸ್ತ್ರೀಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸುತ್ತಿದ್ದು, ಆಧುನಿಕ ಮಹಿಳೆ ಸಬಲಳಾಗುತ್ತಿದ್ದಾಳೆ ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ ಸಂಚಾಲಕರಾದ  ವೇದಲಕ್ಷ್ಮೀ ಜಿ, ಅಧ್ಯಾಪಕರುಗಳಾದ ಪ್ರೊ.ಸುರೇಶ್.ಸಿ.ಜಿ., ಶ್ರೀನಿವಾಸ್, ಮಂಜುನಾಥ, ಸುನಂದ ಬಿ., ಮುರುಳೀಧರ ಕೆ., ಅಧೀಕ್ಷಕರುಗಳಾದ ಚಂದ್ರಕಲಾ ಎನ್.,  ಯೋಗಿಶ್‌ ಕುಮಾರ್, ಸುರೇಶ್‌ ಯಾದವ್, ಡಾ.ನಾರಾಯಣಸ್ವಾಮಿ  ಹಾಜರಿದ್ದರು.

    ಕಾರ್ಯಕ್ರಮದಲ್ಲಿ ರಕ್ಷಿತಾ ಮತ್ತು ಮೇಘನಾ ಪ್ರಾರ್ಥನೆ ಸಲ್ಲಿಸಿದರು, ರಶ್ಮಿರವರು ಸ್ವಾಗತಿಸಿದರೆ, ವಿದ್ಯಾರ್ಥಿಗಳು ಅನಿಸಿಕೆಗಳನ್ನು ತಿಳಿಸಿದರು. ನಾಗಶ್ರೀರವರು ವಂದನಾರ್ಪಣೆಯನ್ನು ಸಲ್ಲಿಸಿದರು. ರಂಜಿತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ

    August 6, 2026

    ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ

    July 30, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ವರದಿ: ಅರವಿಂದ ಮಲ್ಲೀಗೆ, ಬೀದರ್ ಬೀದರ್: ನಗರದ ಹೃದಯ ಭಾಗದಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ₹83 ಲಕ್ಷದ ಹೈ–ವೋಲ್ಟೇಜ್ ಶೂಟ್…

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.