nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    • ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
    • ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
    • ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
    • ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    • ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಿಂಗಸಮಾನತೆಯಿಂದ ಮಾತ್ರ ಸ್ತ್ರೀಸಬಲೀಕರಣ ಸಾಧ್ಯ: ಡಾ.ಆಶ್ವಾಖ್ ಅಹಮದ್
    ಮಧುಗಿರಿ April 17, 2025

    ಲಿಂಗಸಮಾನತೆಯಿಂದ ಮಾತ್ರ ಸ್ತ್ರೀಸಬಲೀಕರಣ ಸಾಧ್ಯ: ಡಾ.ಆಶ್ವಾಖ್ ಅಹಮದ್

    By adminApril 17, 2025No Comments2 Mins Read
    madhugiri college

    ಮಧುಗಿರಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಧುಗಿರಿ ಮತ್ತು ಸಮಾಜಶಾಸ್ತ್ರ ವಿಭಾಗ ಹಾಗು ಐ.ಕ್ಯೂ.ಎ.ಸಿ. ಇವುಗಳ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದಿತು.

    ಕಾರ್ಯಕ್ರಮದಲ್ಲಿ ಡಾ.ಆಶ್ವಾಖ್ ಅಹಮದ್, ಸಹ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಸಮಾಜಶಾಸ್ತ್ರ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಇವರು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ “ಲಿಂಗತಾರತಮ್ಯ ಮತ್ತು ಸ್ತ್ರೀ ಸಬಲೀಕರಣ: ಸಮಸ್ಯೆಗಳು ಮತ್ತು ಸವಾಲುಗಳು” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳನ್ನು ಉದ್ಧೇಶಿಸಿ ಮಾತನಾಡುತ್ತಾ ಲಿಂಗಸಮಾನತೆಯಿಂದ ಮಾತ್ರ ಸ್ತ್ರೀಸಬಲೀಕರಣ ಸಾಧ್ಯ, ಲಿಂಗತಾರತಮ್ಯವು ಒಂದು ಸಮಸ್ಯೆಯಾದರೆ ಸ್ತ್ರೀಸಬಲೀಕರಣವು ಈ ಸಮಸ್ಯೆಯ ಪರಿಹಾರವಾಗಿದೆ. ನಿರ್ದೆಷ್ಟ ಲಿಂಗ ಎನ್ನುವ ಕಾರಣಕ್ಕೆ ವ್ಯಕ್ತಿಯ ಹಕ್ಕುಗಳು ಮತ್ತು ಅವಕಾಶಗಳನ್ನು ನಿರಾಕರಿಸುವುದೆ ಲಿಂಗ ಅಸಮಾನತೆಯಾಗಿದೆ. ಲಿಂಗತಾರತಮ್ಯ ನಿವಾರಣೆಯಾದರೆ ಮಾತ್ರ ಸಾಮಾಜಿಕ ಆರ್ಥಿಕ ಅಭಿವೃದ್ಧಿ ಸಾಧ್ಯ ಲಿಂಗತಾರತಮ್ಯವು ಸ್ತ್ರೀಸಬಲೀಕರಣಕ್ಕೆ ಸವಾಲನ್ನೋಡ್ಡುತ್ತಿದ್ದು ಲಿಂಗತಾರತಮ್ಯಕ್ಕೆ ಜೈವಿಕ ಅಂಶ ಕಾರಣವಾಗುವುದರ ಜೊತೆಗೆ ಮಾನಸಿಕ, ಸಾಮಾಜಿಕ ಅಂಶಗಳು ಕಾರಣವಾಗುತ್ತವೆ. ಸಮಾಜದಲ್ಲಿ ಲಿಂಗತಾರತಮ್ಯಕ್ಕೆ ಕಡಿವಾಣ ಹಾಕಬೇಕಾದರೆ ಜನರ ಮಾನಸಿಕ, ಸಾಮಾಜಿಕ ಅಂಶಗಳಲ್ಲಿ ಬದಲಾವಣೆಯಾಗಬೇಕಾಗುತ್ತದೆ. ಸ್ತ್ರೀ ಸಬಲೀಕರಣ ಕುಟುಂಬದಿಂದಲೇ ಪ್ರಾರಂಭವಾಗಬೇಕು, ತಾಯಿಯ ಪಾತ್ರ ಮುಖ್ಯವಾಗಿರುತ್ತದೆ. ಮಹಿಳೆಯರ ಹಕ್ಕನ್ನು ಗೌರವಿಸಬೇಕಾಗುತ್ತದೆ. ಗಂಡು ಮಕ್ಕಳಿಗೆ ಉತ್ತಮ ಸಾಮಾಜಿಕರಣದ ಮೂಲಕ ಬೆಳಸಬೇಕಾಗುತ್ತದೆ, ಸ್ತ್ರೀಯರಿಗೆ ಶಿಕ್ಷಣ, ಉದ್ಯೋಗ, ಆರ್ಥಿಕ ಸ್ವಾತಂತ್ರ್ಯ, ರಾಜಕೀಯ ಸಹಭಾಗಿತ್ವ ನಿರ್ಧಾರದ ಹಕ್ಕು ನೀಡಿ ಸಬಲೀಕರಣ ಮಾಡಬೇಕು ಎಂದು ಅಭಿಪ್ರಾಯಪಟ್ಟರು.


    Provided by
    Provided by

    ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಡಾ.ವಿಜಯಲಕ್ಷ್ಮೀ ಎನ್., ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಧುಗಿರಿರವರು ಇಂದು ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒಂದು ಉತ್ತಮ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಇದು ಉಪಯುಕ್ತ ಕಾರ್ಯಕ್ರಮವಾಗಿದೆ. ಲಿಂಗತಾರತಮ್ಯತೆ, ಅಸಮಾನತೆ ಹಾಗೂ ಇನ್ನಿತರ ಬಗೆಯ ಸಂಕಷ್ಟಗಳಿಗೆ ಒಳಗಾಗಿರುವ ಸ್ತ್ರೀಯರಿಗೂ ಕೂಡ ಪುರುಷರಿಗೆ ಸರಿಸಮಾನವಾದ ಅಂತಸ್ತು ಹಾಗೂ ಅವಕಾಶಗಳನ್ನು ನೀಡ ಸ್ತ್ರೀಯರನ್ನು ಸಶಕ್ತರನ್ನಾಗಿಸಬೇಕಾದ ಅನಿವಾರ್ಯತೆ ಇದೆ. ಸ್ತ್ರೀಯರು ಸ್ವಸಾಮರ್ಥ್ಯವನ್ನು ಬಳಸಿ ಶಕ್ತಿಯುತವಾಗಿ ಹೊರಹೊಮ್ಮಿ ಸಮಾಜದಲ್ಲಿ ಉತ್ತಮ ಸಾಧನೆ ಮಾಡುವುದರ ಮೂಲಕ ಈ ಸ್ಪರ್ಧಾತ್ಮಕ ಸಮಾಜದಲ್ಲಿ ಯಾವುದಕ್ಕೂ ಕಡಿಮೆ ಇಲ್ಲದಂತೆ ಬೆಳೆದು ಸಮಸಮಾಜದ ನಿರ್ಮಾಣಕ್ಕೆ ನಾಂದಿ ಹಾಡಬೇಕೆಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದ ಅಧ್ಯಕತೆಯನ್ನು ವಹಿಸಿದ್ದ ಪ್ರಭಾರ ಪ್ರಾಚಾರ್ಯರಾದ ಡಾ.ಶಂಕರ ಲಿಂಗಯ್ಯ ಎಂ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ,  ಸಮಾಜಶಾಸ್ತ್ರ ವಿಭಾಗವು ವಿದ್ಯಾರ್ಥಿಗಳಿಗೆ ಉತ್ತಮ ಕಾರ್ಯಕ್ರಮವನ್ನು ರೂಪಿಸಿದೆ. ಲಿಂಗತಾರತಮ್ಯತೆ ಮತ್ತು ಸ್ತ್ರೀಸಬಲೀಕರಣ ಸಮಾಜದಲ್ಲಿ ಕಂಡುಬರುತ್ತವೆ. ಲಿಂಗತಾರತಮ್ಯತೆ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗುವುದಿಲ್ಲ. ಸ್ತ್ರೀಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸುತ್ತಿದ್ದು, ಆಧುನಿಕ ಮಹಿಳೆ ಸಬಲಳಾಗುತ್ತಿದ್ದಾಳೆ ಎಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ ಸಂಚಾಲಕರಾದ  ವೇದಲಕ್ಷ್ಮೀ ಜಿ, ಅಧ್ಯಾಪಕರುಗಳಾದ ಪ್ರೊ.ಸುರೇಶ್.ಸಿ.ಜಿ., ಶ್ರೀನಿವಾಸ್, ಮಂಜುನಾಥ, ಸುನಂದ ಬಿ., ಮುರುಳೀಧರ ಕೆ., ಅಧೀಕ್ಷಕರುಗಳಾದ ಚಂದ್ರಕಲಾ ಎನ್.,  ಯೋಗಿಶ್‌ ಕುಮಾರ್, ಸುರೇಶ್‌ ಯಾದವ್, ಡಾ.ನಾರಾಯಣಸ್ವಾಮಿ  ಹಾಜರಿದ್ದರು.

    ಕಾರ್ಯಕ್ರಮದಲ್ಲಿ ರಕ್ಷಿತಾ ಮತ್ತು ಮೇಘನಾ ಪ್ರಾರ್ಥನೆ ಸಲ್ಲಿಸಿದರು, ರಶ್ಮಿರವರು ಸ್ವಾಗತಿಸಿದರೆ, ವಿದ್ಯಾರ್ಥಿಗಳು ಅನಿಸಿಕೆಗಳನ್ನು ತಿಳಿಸಿದರು. ನಾಗಶ್ರೀರವರು ವಂದನಾರ್ಪಣೆಯನ್ನು ಸಲ್ಲಿಸಿದರು. ರಂಜಿತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    November 16, 2025

    ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

    November 16, 2025

    ಒಂದು ಕಾಲು ಕಾಂಗ್ರೆಸ್ ನಲ್ಲಿ, ಇನ್ನೊಂದು ಕಾಲು ಎಲ್ಲಿಡಲಿದ್ದಾರೆ ಕೆ.ಎನ್.ರಾಜಣ್ಣ? | ಪಕ್ಷಾಂತರಕ್ಕೆ ಸಿದ್ಧತೆ?

    November 13, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಬೆಂಗಳೂರು: ಕಬ್ಬು ಬೆಳೆಗಾರರ  ಸಮಸ್ಯೆ ಸೇರಿ ರಾಜ್ಯದ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಸಿಎಂ…

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.