ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದ್ದು ದಿನಕ್ಕೊಂದು ಮಾನಭಂಗ, ಅತ್ಯಾಚಾರ ಪ್ರಕರಣಗಳು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುತ್ತಲೇ ಇದೆ ಎಂದು ಆರ್.ಅಶೋಕ್ ಹೇಳಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಅರಾಜಕತೆಗೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ, ಮಹಿಳೆಯರ ಮೇಲೆ ಅತ್ಯಾಚಾರವಾದರೆ ಬಿಜೆಪಿ ಕಾಲದಲ್ಲಿ ರೇಪ್ ಆಗಿಲ್ಲವಾ ಎಂದು ಉಡಾಫೆ ಕೊಡುತ್ತೀರಲ್ಲಾ, ನಿಮ್ಮ ಸರ್ಕಾರದ ಈ ಸಂವೇದನಾರಹಿತ ಧೋರಣೆ, ಅಲಕ್ಷ್ಯವೇ ಇವತ್ತಿನ ಅರಾಜಕತೆಗೆ ಕಾರಣ ಎಂದು ಅವರು ಪ್ರಶ್ನಿಸಿದ್ದಾರೆ.
ಆಕಸ್ಮಿಕ ಗೃಹ ಸಚಿವ ಡಾ.ಪರಮೇಶ್ವರ್ ಅವರೇ, 8 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆ ಮೂವರು ಕಾಮುಕರನ್ನು ಪತ್ತೆ ಹಚ್ಚಿ, ಬಂಧಿಸಿ, ಕಾನೂನಿನ ವಶಕ್ಕೆ ಒಪ್ಪಿಸಿ. ಮಹಿಳೆಯರ ಸುರಕ್ಷತೆಯ ವಿಷಯವನ್ನ ಗಂಭೀರವಾಗಿ ಪರಿಗಣಿಸಿ ನಾಡಿನ ಹೆಣ್ಣುಮಕ್ಕಳಿಗೆ ನಿರ್ಭೀತಿಯಿಂದ ಓಡಾಡುವ ಗ್ಯಾರೆಂಟಿ ಕೊಡಿ ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4