nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ
    ರಾಜ್ಯ ಸುದ್ದಿ May 28, 2024

    ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

    By adminMay 28, 2024No Comments3 Mins Read
    udupi

    ಉಡುಪಿ: ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1(ಪೊಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ.

    ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪತ್ರಕರ್ತರಿಗೆ ಮೇ 21 ರಂದು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾದ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.


    Provided by
    Provided by

    ಪೋಕ್ಸೊ ಕಾಯಿದೆ 2012ರಲ್ಲಿ ಜಾರಿಗೆ ಬಂದಿದ್ದು, 18ವರ್ಷದ ಕೆಳಗಿನ ನೊಂದ ಮಕ್ಕಳಿಗೆ ಇದರಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಿಶೇಷ ಪೋಲಿಸರು ಅದರಲ್ಲೂ ಮಹಿಳೆಯರು ಇವರನ್ನು ವಿಚಾರಣೆ ಮಾಡಬೇಕು ಮತ್ತು ಮಹಿಳಾ ವೈದ್ಯಾಧಿಕಾರಿಗಳೇ ವೈದ್ಯಕೀಯ ಪರೀಕ್ಷೆ ನಡೆಸ ಬೇಕು. ಯಾವುದೇ ಸಂದರ್ಭದಲ್ಲೂ ಇವರನ್ನು ಸಾರ್ವಜನಿಕ ಸಂಪರ್ಕಕ್ಕೆ ತರಲು ಅವಕಾಶ ಇಲ್ಲ ಎಂದು ಅವರು ಮಾಹಿತಿ ನೀಡಿದರು.

    ವಿಶೇಷ ನ್ಯಾಯಾಲಯದಲ್ಲಿ ಪೊಕ್ಸೋ ಪ್ರಕರಣದ ವಿಚಾರಣೆ ಕೂಡ ಬೇರೆ ರೀತಿಯಲ್ಲಿ ಇರುತ್ತದೆ. ಅಪ್ರಾಪ್ತ ಬಾಲಕಿಯರು ಗರ್ಭಿಣಿಯರಾದರೆ ಆ ಬಗ್ಗೆ ವೈದ್ಯಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಬೇಕಾಗುತ್ತದೆ. ಇಂತಹ ದೌರ್ಜನ್ಯಗಳ ಬಗ್ಗೆ ಯಾರಿಗೂ ಮಾಹಿತಿ ಇರುತ್ತದೆಯೋ ಅವರು ಸಂಬಂಧಪಟ್ಟವರಿಗೆ ತಿಳಿಸ ಬೇಕು. ಇಲ್ಲದಿದ್ದರೆ ಅವರು ಕೂಡ ಅಪರಾಧಿಗಳಾಗುತ್ತಾರೆ ಎಂದರು.

    ಪೋಕ್ಸೊ ಪ್ರರರಣಗಳಲ್ಲಿ ನೊಂದ ಬಾಲಕ ಬಾಲಕಿಯರ ವಿಚಾರಣೆಯನ್ನು 30 ದಿನಗಳೊಳಗೆ ಮುಗಿಸಬೇಕು ಮತ್ತು ಒಂದು ವರ್ಷದೊಳಗೆ ಇಡೀ ಪ್ರಕರಣದ ಪೂರ್ಣ ವಿಚಾರಣೆಯನ್ನು ನಡೆಸಬೇಕಾಗುತ್ತದೆ. ಗ್ರಾಮೀಣ ಪ್ರದೇಶ ಗಳಲ್ಲಿ ಪೋಕ್ಸೊ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವುದರಿಂದ ಮಾಧ್ಯಮಗಳು ಈ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

    ಸಂವಿಧಾನ ಜಾರಿಗೆ ಬಂದು ಹಲವು ದಶಕಗಳಾದರೂ ಮೂಲಭೂತ ಹಕ್ಕು ಹಾಗೂ ಸೌಲಭ್ಯಗಳು ಜನರಿಗೆ ಇನ್ನೂ ತಲುಪಿಲ್ಲ. ಕಾನೂನಿನಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದ್ದರೂ ಅವರ ಮೇಲೆ ನಿರಂತರವಾಗಿ ದೌರ್ಜನ್ಯ ಗಳು ನಡೆಯುತ್ತಿರುವುದು ದುರಂತ. ಕಾನೂನಿನ ತಿಳುವಳಿಕೆ ಕಡಿಮೆ ಇರುವುದ ರಿಂದ ಪೋಕ್ಸೊ ಪ್ರಕರಣಗಳು ಜಾಸ್ತಿಯಾಗಿ ನಡೆಯುತ್ತಿವೆ ಎಂದು ಅವರು ತಿಳಿಸಿದರು.

    ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶೆ ಶರ್ಮಿಳಾ ಎಸ್. ಮಾತನಾಡಿ, ಪೋಕ್ಸೊ ಪ್ರಕರಣಕ್ಕೆ ಮೂಲ ಕಾರಣ ಮೊಬೈಲ್ ಬಳಕೆ. ಮಕ್ಕಳು ಮೊಬೈಲ್ ಜಾಸ್ತಿ ಬಳಸುತ್ತಿದ್ದರೆ ಅವರ ಮೇಲೆ ಗಮನ ಹರಿಸಬೇಕಾಗಿರುವುದು ಪೋಷಕರ ಜವಾಬ್ದಾರಿಯಾಗಿದೆ. ಮೊಬೈಲ್‌ನಲ್ಲಿ ಚಾಟಿಂಗ್ ಮೂಲಕ ಆರಂಭವಾದ ಗೆಳೆತನ ಲೈಂಗಿಕ ದೌರ್ಜನ್ಯದಲ್ಲಿ ಅಂತಿಮವಾಗುತ್ತದೆ ಎಂದು ಹೇಳಿದರು.

    ಪೋಕ್ಸೋ ಪ್ರಕರಣಗಳ ದುರುಪಯೋಗ ಕೂಡ ನಡೆಯುತ್ತಿದೆ. ಆ ರೀತಿ ದುರುಪಯೋಗ ಮಾಡುವುದು ಕೂಡ ಅಪರಾಧವಾಗುತ್ತದೆ. ಮಾಧ್ಯಮ ಸಮಾಜ ಕನ್ನಡಿಯಾಗಿದ್ದು, ಅವುಗಳು ಈ ಎಲ್ಲ ವಿಚಾರಗಳನ್ನು ತಮ್ಮ ಮಾಧ್ಯಮಗಳ ಮೂಲಕ ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾರ್ಯ ಮಾಡಬೇಕು. ಪ್ರಕರಣದ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು ವರದಿ ಮಾಡಬೇಕು ಎಂದು ಅವರು ತಿಳಿಸಿದರು.

    ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಿಚಾರ ಮಂಡಿಸಿ , 2012ರಲ್ಲಿ ಅನುಷ್ಠಾನಕ್ಕೆ ಬಂದ ಪೋಕ್ಸೋ ಕಾಯಿದೆಯಡಿ 20ವರ್ಷಗಳ ವರೆಗೂ ಶಿಕ್ಷೆ ವಿಧಿಸಬಹುದಾಗಿದೆ. 2019ರಲ್ಲಿ ಆಗಿರುವ ತಿದ್ದುಪಡಿಯಿಂದ ಈ ಪ್ರಕರಣದಲ್ಲಿ ಮರಣ ದಂಡನೆ ಕೂಡ ವಿಧಿಸಬಹುದಾಗಿದೆ. ಈ ಕಾಯಿದೆಯ ಕಲಂ 23ರನ್ನು ವಿಶೇಷವಾಗಿ ಮಾಧ್ಯಮಕ್ಕಾಗಿಯೇ ರೂಪಿಸ ಲಾಗಿದೆ. ಈ ಪ್ರಕರಣದ ಸುದ್ದಿ ಮಾಡುವಾಗ ಸಂತ್ರಸ್ತೆಯರ ಹೆಸರು, ವಿಳಾಸದಲ್ಲಿ ಗೌಪ್ಯತೆ ಕಾಪಾಡಬೇಕಾಗುತ್ತದೆ ಎಂದು ತಿಳಿಸಿದರು.

    ಮಾಧ್ಯಮಗಳಿಗೂ ಈ ಪ್ರಕರಣಗಳ ಬಗ್ಗೆ ಸುದ್ದಿ ಮಾಡಿ ಸಮಾಜಕ್ಕೆ ಮಾಹಿತಿ ನೀಡಬೇಕಾಗುತ್ತದೆ. ಆಗ ಅವರು ಸಂತ್ರಸ್ತೆಯ ಊರು, ವಿಳಾಸ ತಿಳಿಸುವ ಬದಲು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಎಂಬುದಾಗಿ ಉಲ್ಲೇಖಿಸಬಹುದು. ಕೆಲವೊಂದು ಅನಿವಾರ್ಯ ಸಂದರ್ಭದಲ್ಲಿ ಸಂತ್ರಸ್ತೆಯರ ಆಸಕ್ತಿಯಲ್ಲಿ ಹೆಸರನ್ನು ಪ್ರಕಟಿಸಬೇಕಾದರೆ ವಿಶೇಷ ನ್ಯಾಯಾಲಯದ ಅನುಮತಿ ಪಡೆದು ಕೊಳ್ಳಬೇಕು ಎಂದು ಅವರು ಹೇಳಿದರು.

    ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತೆಯರ ಹೆಸರು ಉಲ್ಲೇಖ ಮಾಡಿದ್ದಲ್ಲಿ ವರದಿ ಮಾಡಿದ ವರದಿಗಾರ ಮಾತ್ರವಲ್ಲ ಸುದ್ದಿ ವಾಚಕರು, ಸಂಪಾದಕರು ಹಾಗೂ ಮಾಲಕರು ಇದಕ್ಕೆ ಬಾದ್ಯರಾಗುತ್ತಾರೆ. ಅವರ ಮೇಲೂ ಪ್ರಕರಣಗಳು ದಾಖ ಲಾಗುತ್ತವೆ ಎಂದ ಅವರು, ಈ ಕಾಯಿದೆಯಡಿ ಸುಳ್ಳು ಸುಳ್ಳು ದೂರು ನೀಡುವುದು ಕೂಡ ಅಪರಾಧವಾಗಿರುತ್ತದೆ. ಆ ಬಗ್ಗೆ ಸಮಾಜಕ್ಕೆ ತಿಳಿಸುವುದು ಮಾಧ್ಯಮಗಳ ಜವಾಬ್ದಾರಿಯಾಗಿದೆ. ಇದರ ಈ ಕಾಯಿದೆಯ ದುರುಯೋಗ ತಡೆಯ ಬಹುದಾಗಿದೆ ಎಂದರು.

    ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಕಾರ್ಯದರ್ಶಿ ರಾಜೇಶ್ ಅಚ್ಲಾಡಿ ಕಾರ್ಯಕ್ರಮ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.