nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026
    Facebook Twitter Instagram
    ಟ್ರೆಂಡಿಂಗ್
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ಕಡೆ ವಿಶ್ವ ತಿರುಗುತ್ತಿದೆ:  ನವಗ್ರಹ ದೇವಾಲಯ ಲೋಕಾರ್ಪಣೆ ನೆರವೇರಿಸಿ ರಾಜ್ಯಪಾಲ ಗೆಹ್ಲೋಟ್ ಅಭಿಮತ
    ಕುಣಿಗಲ್ February 23, 2025

    ಭಾರತದ ಕಡೆ ವಿಶ್ವ ತಿರುಗುತ್ತಿದೆ:  ನವಗ್ರಹ ದೇವಾಲಯ ಲೋಕಾರ್ಪಣೆ ನೆರವೇರಿಸಿ ರಾಜ್ಯಪಾಲ ಗೆಹ್ಲೋಟ್ ಅಭಿಮತ

    By adminFebruary 23, 2025No Comments2 Mins Read
    gehlot

    ತುಮಕೂರು (ಕುಣಿಗಲ್) : ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು ಘನತೆವೆತ್ತ ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

    ಅವರು ಇಂದು  ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಬಿದನಗೆರೆ ಶ್ರೀ ಬಸವೇಶ್ವರ ಮಠದ ನೂತನವಾಗಿ ನಿರ್ಮಿಸಿರುವ ನವಗ್ರಹ ದಂಪತಿ ದೇವಾಲಯ ಹಾಗೂ ನೂತನ ಗೋಪುರ ಉದ್ಘಾಟನೆ ನೆರವೇರಿಸಿ  ಮಾತನಾಡಿದರು.

    ಭಾಷಣದ ಆರಂಭದಲ್ಲಿ ಕನ್ನಡ ದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ರಾಜ್ಯ ಪಾಲರು, ಮಠದ ಸಂತರು, ಋಷಿಮುನಿಗಳು, ಆಚಾರ್ಯರು ಮತ್ತು ಶ್ರೇಷ್ಠ ಸಂಪ್ರದಾಯಗಳು ಮತ್ತು ಪ್ರಯತ್ನಗಳಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ. ಸಮಾರಂಭಕ್ಕೆ ಆಗಮಿಸುವ ಮೂಲಕ ನಿಮ್ಮೆಲ್ಲರ ಒಡನಾಟದಲ್ಲಿರುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ತುಮಕೂರು ಜಿಲ್ಲೆ, ಕಲ್ಪತರು ನಾಡಿನ ಕುಣಿಗಲ್ ತಾಲೂಕಿನಲ್ಲಿರುವ “ಬಿದನ ಗೆರೆ ಬಸವೇಶ್ವರ ಮಠ” ಧಾರ್ಮಿಕ ಸ್ಥಳವಲ್ಲದೆ, ಭಕ್ತರಿಗೆ ಆಧ್ಯಾತ್ಮಿಕ ಶಾಂತಿ ಮತ್ತು ಸ್ಫೂರ್ತಿಯ ಮೂಲವಾಗಿದೆ ಮತ್ತು ಸಮುದಾಯಕ್ಕೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಸ್ಫೂರ್ತಿಯ ಕೇಂದ್ರವಾಗಿದೆ ಎಂದರು.

    ಬಸವೇಶ್ವರರ ಬೋಧನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಸಮಾಜ ಸುಧಾರಣೆಗೆ ಸಹಕಾರಿಯಾಗಿದೆ. ಇಲ್ಲಿಗೆ ಬರುವ ಜನರು ಬಸವೇಶ್ವರರ ಬೋಧನೆಗಳನ್ನು ಆಸ್ವಾಧಿಸುವ ಜೊತೆಗೆ ಜೀವನದಲ್ಲಿ ನೈತಿಕತೆ, ಸಮಾನತೆ ಮತ್ತು ಭಕ್ತಿಯನ್ನು ಅನುಸರಿಸಲು ಸ್ಫೂರ್ತಿ ಪಡೆಯುತ್ತಾರೆಂದರು.

    ನಮ್ಮ ಋಷಿಮುನಿಗಳು, ಮತ್ತು ಗುರುಗಳು ಅನಾದಿ ಕಾಲದಿಂದಲೂ ನಿರಂತರವಾಗಿ ರಕ್ಷಿಸುತ್ತಾ ಬಂದಿರುವ ನಮ್ಮ ಸಂಸ್ಕೃತಿಯು ಶಾಶ್ವತವಾಗಿದೆ. ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಭ್ರಾತೃತ್ವ, ವಿಶ್ವ ಶಾಂತಿ ಮತ್ತು ವಿಶ್ವ ಕಲ್ಯಾಣ ಮತ್ತು ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ.ಸಾಧುಗಳು, ಸಂತರು, ಆಚಾರ್ಯರು ಮತ್ತು ಋಷಿಮುನಿಗಳು ವಿಶ್ವ ವೇದಿಕೆಯಲ್ಲಿ ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಧ್ವಜವನ್ನು ಹಾರಿಸಿದ್ದಾರೆಂದರು.

    ಈ ಪವಿತ್ರ ಸ್ಥಳದಲ್ಲಿ ವಿಶ್ವವಿಖ್ಯಾತ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಶ್ರೀ ಶನೇಶ್ವರ ಸ್ವಾಮಿ ಮತ್ತು ನವಗ್ರಹಗಳ ದರ್ಶನಕ್ಕಾಗಿ ದೇಶ ವಿದೇಶಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ. ಈ ಪ್ರದೇಶವನ್ನು “ಕರ್ನಾಟಕದ ಶನಿ ಸಿಂಗನಾಪುರ” ಎಂದೂ ಕರೆಯುತ್ತಾರೆ. ಶ್ರೀ ಮಠದ ಪೀಠಾಧೀಶ್ವರರಾದ ಧನಂಜಯ ಗುರೂಜಿಯವರು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ರಕ್ಷಕರ ಜೊತೆಗೆ ಚಿಂತನಶೀಲರು ಮತ್ತು ಸಂವೇದನಾಶೀಲರು ಎಂದು ಬಣ್ಣಿಸಿದರು.

    ಬಹು ಆಯಾಮದ ಸಂಸ್ಥೆಯಾಗಿರುವ ಈ ಮಠವು ಸಾಮಾಜಿಕ ಪ್ರಗತಿಯಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. ಇಲ್ಲಿ ಪ್ರತಿದಿನ ಸಾವಿರಾರು ಭಕ್ತರಿಗೆ ದಾಸೋಹ ಅಂದರೆ ಅನ್ನದಾನವನ್ನು ನೀಡಲಾಗುತ್ತದೆ.ಸಮಾಜದಲ್ಲಿ ಪ್ರಚಲಿತದಲ್ಲಿರುವ ಹಲವಾರು ಸಮಸ್ಯೆಗಳನ್ನು ನಿವಾರಿಸಲು ನಿಮ್ಮಿಂದ ಅನೇಕ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಶ್ಲಾಘಿಸಿದರು.

    ಭಾಷಣದ ಕಡೆಯಲ್ಲಿ ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ”  ಪ್ರಾರ್ಥನೆಯೊಂದಿಗೆ, ನಾನು ಇಲ್ಲಿ ಇರುವ ಎಲ್ಲಾ ಸಂತರು ಮತ್ತು ಮಹಾಪುರುಷರಿಂದ ಆಶೀರ್ವಾದವನ್ನು ಕೋರುತ್ತೇನೆಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


    Provided by
    Provided by
    admin
    • Website

    Related Posts

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ

    July 14, 2026

    ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ

    July 5, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಔರಾದ್: ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಆರ್ಥಿಕ ಹಾಗೂ ಉದ್ಯೋಗ ಭದ್ರತೆ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ವಿಬಿ-ಜಿ…

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.