nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ಕಡೆ ವಿಶ್ವ ತಿರುಗುತ್ತಿದೆ:  ನವಗ್ರಹ ದೇವಾಲಯ ಲೋಕಾರ್ಪಣೆ ನೆರವೇರಿಸಿ ರಾಜ್ಯಪಾಲ ಗೆಹ್ಲೋಟ್ ಅಭಿಮತ
    ಕುಣಿಗಲ್ February 23, 2025

    ಭಾರತದ ಕಡೆ ವಿಶ್ವ ತಿರುಗುತ್ತಿದೆ:  ನವಗ್ರಹ ದೇವಾಲಯ ಲೋಕಾರ್ಪಣೆ ನೆರವೇರಿಸಿ ರಾಜ್ಯಪಾಲ ಗೆಹ್ಲೋಟ್ ಅಭಿಮತ

    By adminFebruary 23, 2025No Comments2 Mins Read
    gehlot

    ತುಮಕೂರು (ಕುಣಿಗಲ್) : ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು ಘನತೆವೆತ್ತ ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

    ಅವರು ಇಂದು  ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಬಿದನಗೆರೆ ಶ್ರೀ ಬಸವೇಶ್ವರ ಮಠದ ನೂತನವಾಗಿ ನಿರ್ಮಿಸಿರುವ ನವಗ್ರಹ ದಂಪತಿ ದೇವಾಲಯ ಹಾಗೂ ನೂತನ ಗೋಪುರ ಉದ್ಘಾಟನೆ ನೆರವೇರಿಸಿ  ಮಾತನಾಡಿದರು.

    ಭಾಷಣದ ಆರಂಭದಲ್ಲಿ ಕನ್ನಡ ದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ರಾಜ್ಯ ಪಾಲರು, ಮಠದ ಸಂತರು, ಋಷಿಮುನಿಗಳು, ಆಚಾರ್ಯರು ಮತ್ತು ಶ್ರೇಷ್ಠ ಸಂಪ್ರದಾಯಗಳು ಮತ್ತು ಪ್ರಯತ್ನಗಳಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ. ಸಮಾರಂಭಕ್ಕೆ ಆಗಮಿಸುವ ಮೂಲಕ ನಿಮ್ಮೆಲ್ಲರ ಒಡನಾಟದಲ್ಲಿರುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ತುಮಕೂರು ಜಿಲ್ಲೆ, ಕಲ್ಪತರು ನಾಡಿನ ಕುಣಿಗಲ್ ತಾಲೂಕಿನಲ್ಲಿರುವ “ಬಿದನ ಗೆರೆ ಬಸವೇಶ್ವರ ಮಠ” ಧಾರ್ಮಿಕ ಸ್ಥಳವಲ್ಲದೆ, ಭಕ್ತರಿಗೆ ಆಧ್ಯಾತ್ಮಿಕ ಶಾಂತಿ ಮತ್ತು ಸ್ಫೂರ್ತಿಯ ಮೂಲವಾಗಿದೆ ಮತ್ತು ಸಮುದಾಯಕ್ಕೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಸ್ಫೂರ್ತಿಯ ಕೇಂದ್ರವಾಗಿದೆ ಎಂದರು.

    ಬಸವೇಶ್ವರರ ಬೋಧನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಸಮಾಜ ಸುಧಾರಣೆಗೆ ಸಹಕಾರಿಯಾಗಿದೆ. ಇಲ್ಲಿಗೆ ಬರುವ ಜನರು ಬಸವೇಶ್ವರರ ಬೋಧನೆಗಳನ್ನು ಆಸ್ವಾಧಿಸುವ ಜೊತೆಗೆ ಜೀವನದಲ್ಲಿ ನೈತಿಕತೆ, ಸಮಾನತೆ ಮತ್ತು ಭಕ್ತಿಯನ್ನು ಅನುಸರಿಸಲು ಸ್ಫೂರ್ತಿ ಪಡೆಯುತ್ತಾರೆಂದರು.

    ನಮ್ಮ ಋಷಿಮುನಿಗಳು, ಮತ್ತು ಗುರುಗಳು ಅನಾದಿ ಕಾಲದಿಂದಲೂ ನಿರಂತರವಾಗಿ ರಕ್ಷಿಸುತ್ತಾ ಬಂದಿರುವ ನಮ್ಮ ಸಂಸ್ಕೃತಿಯು ಶಾಶ್ವತವಾಗಿದೆ. ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಭ್ರಾತೃತ್ವ, ವಿಶ್ವ ಶಾಂತಿ ಮತ್ತು ವಿಶ್ವ ಕಲ್ಯಾಣ ಮತ್ತು ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ.ಸಾಧುಗಳು, ಸಂತರು, ಆಚಾರ್ಯರು ಮತ್ತು ಋಷಿಮುನಿಗಳು ವಿಶ್ವ ವೇದಿಕೆಯಲ್ಲಿ ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಧ್ವಜವನ್ನು ಹಾರಿಸಿದ್ದಾರೆಂದರು.

    ಈ ಪವಿತ್ರ ಸ್ಥಳದಲ್ಲಿ ವಿಶ್ವವಿಖ್ಯಾತ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಶ್ರೀ ಶನೇಶ್ವರ ಸ್ವಾಮಿ ಮತ್ತು ನವಗ್ರಹಗಳ ದರ್ಶನಕ್ಕಾಗಿ ದೇಶ ವಿದೇಶಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ. ಈ ಪ್ರದೇಶವನ್ನು “ಕರ್ನಾಟಕದ ಶನಿ ಸಿಂಗನಾಪುರ” ಎಂದೂ ಕರೆಯುತ್ತಾರೆ. ಶ್ರೀ ಮಠದ ಪೀಠಾಧೀಶ್ವರರಾದ ಧನಂಜಯ ಗುರೂಜಿಯವರು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ರಕ್ಷಕರ ಜೊತೆಗೆ ಚಿಂತನಶೀಲರು ಮತ್ತು ಸಂವೇದನಾಶೀಲರು ಎಂದು ಬಣ್ಣಿಸಿದರು.

    ಬಹು ಆಯಾಮದ ಸಂಸ್ಥೆಯಾಗಿರುವ ಈ ಮಠವು ಸಾಮಾಜಿಕ ಪ್ರಗತಿಯಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. ಇಲ್ಲಿ ಪ್ರತಿದಿನ ಸಾವಿರಾರು ಭಕ್ತರಿಗೆ ದಾಸೋಹ ಅಂದರೆ ಅನ್ನದಾನವನ್ನು ನೀಡಲಾಗುತ್ತದೆ.ಸಮಾಜದಲ್ಲಿ ಪ್ರಚಲಿತದಲ್ಲಿರುವ ಹಲವಾರು ಸಮಸ್ಯೆಗಳನ್ನು ನಿವಾರಿಸಲು ನಿಮ್ಮಿಂದ ಅನೇಕ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಶ್ಲಾಘಿಸಿದರು.

    ಭಾಷಣದ ಕಡೆಯಲ್ಲಿ ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ”  ಪ್ರಾರ್ಥನೆಯೊಂದಿಗೆ, ನಾನು ಇಲ್ಲಿ ಇರುವ ಎಲ್ಲಾ ಸಂತರು ಮತ್ತು ಮಹಾಪುರುಷರಿಂದ ಆಶೀರ್ವಾದವನ್ನು ಕೋರುತ್ತೇನೆಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ

    July 14, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಔರಾದ್ (ಬೀದರ್): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಔರಾದ್ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ…

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026

    ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.