nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರವಣಿಗೆಯು ಉತ್ತಮ ಬದುಕಿಗೊಂದು ಮಾರ್ಗ: ಡಾ. ವ್ಹಿ.ಎಸ್ ಕಟಗಿಹಳ್ಳಿಮಠ
    ಜಿಲ್ಲಾ ಸುದ್ದಿ July 11, 2023

    ಬರವಣಿಗೆಯು ಉತ್ತಮ ಬದುಕಿಗೊಂದು ಮಾರ್ಗ: ಡಾ. ವ್ಹಿ.ಎಸ್ ಕಟಗಿಹಳ್ಳಿಮಠ

    By adminJuly 11, 2023No Comments2 Mins Read
    bagalakote

    ಬಾಗಲಕೋಟೆ: ಜ್ಞಾನವು ಭಾಷೆಗಿಂತ ದೊಡ್ಡದಾಗಿದ್ದು ನಿರಂತರ ಅದ್ಯಯನದಿಂದ ಭಾಷಾ ಸಾಮರ್ಥ್ಯವನ್ನು ಅರಿತುಕೊಳ್ಳಲು ಸಾಧ್ಯ. ಓದುವ, ಗ್ರಹಿಸುವ ಮತ್ತು ಕಲ್ಪನಾ ಪ್ರವೃತ್ತಿ ಬೆಳಸಿಕೊಳ್ಳಲು ಬರವಣಿಗೆಯು ಉತ್ತಮ ಮಾದ್ಯಮ ಎಂದು ವಿಶ್ರಾಂತ ಪ್ರಾಚಾರ್ಯರಾದ ಡಾ. ವ್ಹಿ.ಎಸ್ ಕಟಗಿಹಳ್ಳಿಮಠ ಹೇಳಿದರು.

    ಬಿವಿವಿ ಸಂಘದ ಬಸವೇಶ್ವರ ಕಲಾ ಮಾಹಾವಿದ್ಯಾಲಯದಲ್ಲಿ ಕರ್ನಾಟಕ ಸಾಹಿತ್ಯ ಸಂಘ ಹಾಗೂ ಐಕ್ಯೂ ಎಸಿ ಘಟಕದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ಕನ್ನಡ ಬರವಣಿಗೆಯ ಕೌಶಲ್ಯ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನಾ ಸಮಾರಂಭವನ್ನು ಕಪ್ಪೆ ಅರೆಭಟ್ಟನ ಶಾಸನದ ಮೊದಲ ಕನ್ನಡ ತ್ರಿಪದಿಯನ್ನು ಓದುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾವಿರಾರು ವರ್ಷಗಳಿಂದ ಭಾಷೆಗಳು ಸರಳೀಕರಣವಾಗುತ್ತ ಸುಲಭ ಭಾಷೆಗಳಾಗಿ ಬಂದಿದ್ದು ಇದಕ್ಕೆ ಬರವಣಿಗೆಯು ಮೂಲವಾಗಿದೆ ಎಂದರು.


    Provided by
    Provided by

    ಎಲ್ಲರೂ ಮಾತಗಳನ್ನಾಡಬಹುದು ಆದರೆ ಮೆಚ್ಚುಗೆಯಾಗುವ ಬರವಣಿಗೆ ಬರೆಯಬೇಕಾದರೆ ಕೌಶಲ್ಯ ಮುಖ್ಯ. ಬರವಣಿಗೆಗೂ ತನ್ನದೆಯಾದ ಭಾಷೆಯಿದೆ. ಹಿರಿಯ ದರ್ಜೆಯ ಸ್ಪರ್ಧಾತ್ಮಕ ಪರೀಕ್ಷೆಗಳು ಪರಿಣಾಮಕಾರಿ ಬರವಣಿಗೆಯನ್ನು ನಿರೀಕ್ಷಿಸುವುದರಿಂದ ಪರೀಕ್ಷೆಗಳನ್ನು ಎದುರಿಸುವ ಕ್ರಮ ಗೊತ್ತಿದ್ದರೆ ಐಎಸ್, ಕೆಎಸ್ ಪರೀಕ್ಷೆಗಳನ್ನು ಎದುರಿಸುವುದು ಸುಲಭ ಎಂದರು.

    ಸಂಕ್ಷಿಪ್ತ ಬರವಣಿಗೆಯಲ್ಲಿ ಸಮಗ್ರ ವಿವರಣೆಯನ್ನು ನೀಡಬೇಕಾದರೆ ಭಾಷೆಯ ಮಿತಿ ಅರಿತಿರಬೇಕು. ಬಡತನ, ಸಿರಿತನದ ಆಧಾರದ ಮೇಲೆ ಸಾಧಕರಾಗಲು ಸಾಧ್ಯವಿಲ್ಲ. ಆತ್ಮಸ್ಥೈರ್ಯ ಮತ್ತು ಛಲದಿಂದ ಮಾತ್ರ ಗುರಿ ತಲುಪಲು ಸಾಧ್ಯ. ಪ್ರಾಚೀನ ಭಾರತವನ್ನು ಅಧ್ಯಯನ ಮಾಡಿದರೆ ದಕ್ಷಿಣ ಭಾರತದಲ್ಲಿ ಕನ್ನಡ ಭಾಷೆಯೇ ಮೊದಲ ಭಾಷೆಯಾಗಿದ್ದು ಅದಕ್ಕೆ ಬೇಕಾದಷ್ಟು ಪುರಾವೆಗಳಿವೆ. ಇಂತಹ ಭಾಷೆಯನ್ನು ಬಳಸಿಕೊಂಡು ಉಳಿಸಿಕೊಂಡು ಹೋಗುವ ಕಲೆಯನ್ನು ಬೆಳಸಿಕೊಳ್ಳಬೇಕಿದೆ ಎಂದರು.

    ಪ್ರಾಚಾರ್ಯರಾದ ಪ್ರೊ‌. ಎಸ್.ಆರ್ ಮುಗನೂರಮಠ ಅವರು ಮಾತನಾಡಿ ಮಾತುಗಳು ಕ್ಷಣಿಕ ರೂಪವಾಗಿದ್ದು ಅದನ್ನು ಶಾಶ್ವತವಾಗಿ ಉಳಿಸಲು ಬರವಣಿಗೆಯಿಂದ ಮಾತ್ರ ಸಾಧ್ಯ. ವಿಷಯ ವಸ್ತುಗಳನ್ನು ಪ್ರಶ್ನಾರ್ಥಕ ರೂಪದಲ್ಲಿ ನೋಡುವುದನ್ನು ಕಲಿತರೆ ಅರಿವನ್ನು ಬೆಳಸಿಕೊಳ್ಳಬಹುದು. ಬರಹ ದಾಖಲೆಯಾಗುವ ವಿಧಾನವಾಗಿದ್ದು ಕಥೆ, ಸಾಹಿತ್ಯ, ಕಲೆ, ವಿಜ್ಞಾನ ಪ್ರತಿಯೊಂದಕ್ಕೂ ತನ್ನದೆಯಾದ ಬರಹ ಕೌಶಲ್ಯಗಳಿರುತ್ತವೆ ಅವುಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳಸಿಕೊಳ್ಳಬೇಕು. ಭಾಷೆಯನ್ನು ಬರೆಯದಿದ್ದರೆ ಭಾಷೆಯು ಸತ್ತಂತೆ, ಭಾಷೆಯನ್ನು ಬರೆಯಲು ಕಲಿಯದಿದ್ದರೆ ಮನುಷ್ಯನು ಬದುಕಿಯೂ ಸತ್ತಂತೆ ಎಂದರು.

    ಕಾರ್ಯಕ್ರಮದಲ್ಲಿ ಪ್ರಾದ್ಯಾಪಕರಾದ ಡಾ. ಎಸ್. ಡಿ ಕೆಂಗಲಗುತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯೂ ಎಸಿ ಸಂಯೋಜಕ ಡಾ. ಎ.ಯು ರಾಠೋಡ, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ವಿರೂಪಾಕ್ಷ ಎನ್.ಬಿ ಸೇರಿದಂತೆ ವಿವಿಧ ವಿಭಾಗಗಳ ಪ್ರಾದ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ…

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.