nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025
    Facebook Twitter Instagram
    ಟ್ರೆಂಡಿಂಗ್
    • ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ
    • ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ
    • ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!
    • ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ
    • ಮೇಕೆಗಳ ಹಿಂಡಿನ ಮೇಲೆ ಹುಲಿ ದಾಳಿ: ಮೂರು ಮೇಕೆಗಳು ಸಾವು, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ
    • ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು
    • ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    • ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಪ್ರಿಲ್ 12–13ರಂದು ಯಕ್ಷಗಾನ ಬಣ್ಣಗಾರಿಕೆ ಕಮ್ಮಟ, ತಾಳಮದ್ದಳೆ, ಬಯಲಾಟ
    ತುಮಕೂರು April 11, 2025

    ಏಪ್ರಿಲ್ 12–13ರಂದು ಯಕ್ಷಗಾನ ಬಣ್ಣಗಾರಿಕೆ ಕಮ್ಮಟ, ತಾಳಮದ್ದಳೆ, ಬಯಲಾಟ

    By adminApril 11, 2025No Comments1 Min Read
    yakshagana

    ತುಮಕೂರು: ಯಕ್ಷದೀವಿಗೆ ಸಂಸ್ಥೆಯು ಏಪ್ರಿಲ್ 12 ಹಾಗೂ 13ರಂದು ನಗರದ ಶ್ರೀಕೃಷ್ಣಮಂದಿರದಲ್ಲಿ ಎರಡು ದಿನಗಳ ಯಕ್ಷಗಾನ ಬಣ್ಣಗಾರಿಕೆ ಕಮ್ಮಟವನ್ನು ಹಮ್ಮಿಕೊಂಡಿದೆ.

    ಕಮ್ಮಟವನ್ನು ಏಪ್ರಿಲ್ 12ರಂದು ಬೆಳಗ್ಗೆ 9:30ಕ್ಕೆ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಚಂದ್ರಶೇಖರ ದಾಮ್ಲೆ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಮಿತ್ರವೃಂದದ ಅಧ್ಯಕ್ಷ ಅಮರನಾಥ ಶೆಟ್ಟಿ ಕೆಂಜೂರು ಮನೆ, ಕಾರ್ಯದರ್ಶಿ ವೆಂಕಟೇಶ ಎಂ.ಎಸ್.ಕಾರಂತ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯಕ್ಷದೀವಿಗೆಯ ಅಧ್ಯಕ್ಷೆ ಆರತಿ ಪಟ್ರಮೆ ಅಧ್ಯಕ್ಷತೆ ವಹಿಸಲಿದ್ದಾರೆ.


    Provided by
    Provided by
    Provided by

    ಜಿಲ್ಲೆಯ ವಿವಿಧ ಭಾಗಗಳಿಂದ ಕಲಾಸಕ್ತರು ಆಗಮಿಸಿ ಯಕ್ಷಗಾನದ ಮುಖವರ್ಣಿಕೆ ಮಾಡುವ ವಿಧಾನವನ್ನು ಅಭ್ಯಾಸ ಮಾಡಲಿದ್ದಾರೆ. ಯಕ್ಷಗಾನ ಕಲಾವಿದರಾದ ನಿಡುವಜೆ ಗೋಪಾಲಕೃಷ್ಣ ಭಟ್ ಹಾಗೂ ಪಾರ್ಥಸಾರಧಿ ಸಂಪನ್ಮೂಲವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

    ಯಕ್ಷಗಾನ, ನಾಟಕ, ಭರತನಾಟ್ಯ ಇತ್ಯಾದಿ ಕಲೆಗಳಿಗೆ ಸಂಬಂಧಪಟ್ಟವರು ಈ ಕಮ್ಮಟದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದು. ಆಸಕ್ತರು ಮೊಬೈಲ್ ಸಂಖ್ಯೆ 7019394988 ಅಥವಾ 9380750972 ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು.

    ಕಮ್ಮಟದ ಅಂಗವಾಗಿ ಯಕ್ಷದೀವಿಗೆಯ ವಿದ್ಯಾರ್ಥಿಗಳು ಸಂಜೆ 5:30ರಿಂದ ‘ಏಕಲವ್ಯ’ ಎಂಬ ತಾಳಮದ್ದಳೆಯನ್ನು ಪ್ರದರ್ಶಿಸಲಿದ್ದಾರೆ. ಸಂವೃತ ಶರ್ಮಾ, ಇಂಚರಾ, ತೇಜು ವಿಘ್ನೇಶ್, ಫಾಲ್ಗುಣಿ ಶ್ರೀಧರ್, ಅದಿತಿ ಕೃಷ್ಣ, ಹೇಮ್ ಆಶಿಶ್, ಅದ್ವೈತ್, ಮಹಿಮಾ ಭಟ್, ನಿಶಾಂತ್ ಓಂಕಾರ್, ಸಾತ್ವಿಕ್, ಆರ್ಯ, ತೀರ್ಥಜನ್ಯಾ ವಿವಿಧ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.
    ಏಪ್ರಿಲ್ 13ರಂದು ಎಂ.ಜಿ. ರಸ್ತೆಯ ಬಾಲಭವನದಲ್ಲಿ ಸಂಜೆ 6 ರಿಂದ ‘ಗಯಚರಿತ್ರೆ ಅಥವಾ ಕೃಷ್ಣಾರ್ಜುನಕಾಳಗ’ ಎಂಬ ಯಕ್ಷಗಾನ ಬಯಲಾಟವನ್ನು ಅಭಿನಯಿಸಲಿದ್ದಾರೆ. ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರಾದ ಕಾವ್ಯಶ್ರೀ ನಾಯಕ್ ಆಜೇರು, ಅವಿನಾಶ್ ಬೈಪಾಡಿತ್ತಾಯ, ಕೃಷ್ಣಪ್ರಕಾಶ ಉಳಿತ್ತಾಯ ಭಾಗವಹಿಸಲಿದ್ದಾರೆ. ಆರತಿ ಪಟ್ರಮೆ (ಕೃಷ್ಣ), ಸಿಬಂತಿ ಪದ್ಮನಾಭ (ಅರ್ಜುನ), ತೀರ್ಥಜನ್ಯಾ (ಸುಭದ್ರೆ), ಫಾಲ್ಗುಣಿ (ಅಭಿಮನ್ಯು), ಸಂವೃತ (ದಾರುಕ), ಮಹಿಮಾ (ಬಲರಾಮ), ತೇಜು ವಿಘ್ನೇಶ್ (ಭೀಮ), ನಿಶಾಂತ್ (ಈಶ್ವರ), ಇಂಚರಾ (ಪಾರ್ವತಿ) ಭಾಗವಹಿಸಲಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ಕುಣಿಗಲ್: ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ವೃದ್ಧೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ…

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025

    ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ

    October 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.