ತುಮಕೂರು: ಯಡಿಯೂರಪ್ಪ ಪಕ್ಷದ ಪ್ರಶ್ನಾತೀತ ನಾಯಕರು, ನಾನಾಗಲಿ ಯಡಿಯೂರಪ್ಪನವರಾಗರಾಗಲಿ ಕೆಲವೊಮ್ಮೆ ಅನಿವಾರ್ಯ ಅಲ್ಲ. ವ್ಯಕ್ತಿಗಿಂತ ಪಕ್ಷಮುಖ್ಯ, ನಾವ್ಯಾರು ಪಕ್ಷಕ್ಕೆ ಅನಿವಾರ್ಯ ಅಲ್ಲ ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ತಿಪಟೂರು ತಾಲೂಕಿನ ನೋಣವಿನಕೆರೆಯ ಕಾಡಸಿದ್ದೇಶ್ವರ ಮಠಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಭೇಟಿ ನೀಡಿದ ವೇಳೆ ಮಾತನಾಡಿ, ನಾನು ನೋಣವಿನಕೆರೆ ಮಠದ ಭಕ್ತ. ಅದಕ್ಕೆ ಬಂದು ಪೂಜೆ ಮಾಡಿದ್ದೇನೆ. ಡಿಕೆಶಿ ಕೂಡ ಒಬ್ಬ ಭಕ್ತ ಅವರೂ ಪೂಜೆ ಮಾಡಿದ್ದಾರೆ ಎಂದರು.
ಅವರ ಭೇಟಿಗೂ ನನ್ನ ಭೇಟಿಗೂ ಯಾವುದೇ ಸಂಬಂಧ ಇಲ್ಲ. ನಾನು ಚುನಾವಣೆಯಲ್ಲಿ ಸೋತಿದ್ದೇನೆ. ಜನರ ತೀರ್ಪುನ್ನು ಸ್ವೀಕರಿಸಿದ್ದೇನೆ ಎಂದರು. ಸೋಲಿಗೆ ಕಾರಣ ಇನ್ನೇನು ಇಲ್ಲ, ಕಳೆದ ಬಾರಿ ಕಾಂಗ್ರೆಸ್ ಸೋತಿತ್ತು. ಸಿಎಂ ಆಗಿದ್ದರೂ ಸಿದ್ದರಾಮಯ್ಯ ಸೋತಿದ್ದರು ಇದೆಲ್ಲಾ ನಡೆಯುತ್ತಾ ಇರುತ್ತದೆ ಎಂದರು.
ಇಂದಿರಾಗಾಂಧಿ, ರಾಜೀವ್ ಗಾಂಧಿ, ವಾಜಪೇಯಿ ಇವರ್ಯಾರು ಇಲ್ಲ. ಆದರೂ ಪಕ್ಷಗಳಿಲ್ವಾ..! ಯಡಿಯೂರಪ್ಪ ಇಳಿಸಿದಕ್ಕೆ ಲಿಂಗಾಯತರು ಬಿಜೆಪಿಯನ್ನ ಸೋಲಿಸಿದರು ಅನ್ನೋದು ಸರಿಯಲ್ಲ ಎಂದರು.
ಲಿಂಗಾಯತರನ್ನೆ ಯಾಕೆ ಟಾರ್ಗೆಟ್ ಮಾಡ್ತೀರ. ಲಿಂಗಾಯತರು ಸ್ವತಂತ್ರವಾಗಿ ಬದುಕೋದು ಬ್ಯಾಡ್ವಾ…? ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy