ತುಮಕೂರು: ಬಿಜೆಪಿ ಪ್ರಣಾಳಿಕೆಯಲ್ಲಿ ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿ ವಿಚಾರಕೇ ಸಂಬಂಧಿಸಿದಂತೆ ಏಕರೂಪ ನಾಗರಿಕ ಸಂಹಿತೆ ಜಾರಿಯಾದ್ರೆ ದಲಿತರ ಮೇಲೆ ಪ್ರಭಾವ ಬೀರಲ್ಲ ಎಂದು ಕೇಂದ್ರ ಸಚಿವ ಎ ನಾರಾಯಣ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಮಾತನಾಡಿದ ಅವರು, ದಲಿತರ ವಿರುದ್ದ ಚಕಾರ ಎತ್ತುವ ಧೈರ್ಯ ದೇಶದಲ್ಲಿ ಯಾವುದೇ ಪಾರ್ಟಿ ಅಧಿಕಾರಕ್ಕೆ ಬಂದರೂ ಸಾದ್ಯವಿಲ್ಲ. ದಲಿತರ ವಿರುದ್ದವಾಗಿ ಸಂಸತ್ ನಲ್ಲಿ ಇದುವರೆಗೂ ಒಂದೇ ಒಂದು ಹೇಳಿಕೆ ಕೇಳಿ ಬಂದಿಲ್ಲ ಎಂದರು.
ದಲಿತರಿಗೆ ತೊಂದರೆಯಾಗುವಂತಹ ಯಾವುದೇ ಕಾನೂನು ಬಿಜೆಪಿ ಜಾರಿಗೆ ತರುವುದಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ನೀಡಿದೆ ಎಂದರು.
ಚುನಾವಣೆಗಾಗಿ ಕೊಡುವುದಾದ್ರೇ ಬೇಡಾ..ಎಂದು ಆರ್ ಎಸ್ ಎಸ್, ಸಂಘ ಪರಿವಾರ ಎಲ್ಲರೂ ಸಹಮತ ನೀಡಿ ಒಳಮೀಸಲಾತಿ ಜಾರಿ ಮಾಡಿದೆ. ಕೇಂದ್ರದಲ್ಲೂ ಪ್ರಧಾನಿ ಮೋದಿಯವರು ಒಳಮೀಸಲಾತಿಯನ್ನ ಅನುಮೋದನೆ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು. ಬಿಜೆಪಿ ಋಣ ತೀರಿಸುವ ಕೆಲಸವನ್ನ ಸಮಾಜ ಮಾಡುತ್ತದೆ ಎನ್ನುವ ನಂಬಿಕೆ ಇದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy