nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    • “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಓಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಪ್ರತಿಭಟನೆ
    ತುಮಕೂರು August 2, 2022

    ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಓಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಪ್ರತಿಭಟನೆ

    By adminAugust 2, 2022No Comments2 Mins Read
    lingayath

    ತುಮಕೂರು: ಆರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಬೇಕೆಂದು ಆಗ್ರಹಿಸಿ ಇಂದು ಅಖಿಲ ಭಾರತ ವೀರಶೈವ,ಲಿಂಗಾಯಿತ ಮಹಾಸಭಾದವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

    ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ನಂದಿ ಧ್ವಜ,ವೀರಗಾಸೆ ಕಲಾ ಪ್ರದರ್ಶನದ ಜೊತೆಗೆ,ಸಾವಿರಾರು ಸಂಖ್ಯೆಯಲ್ಲಿದ್ದ ಲಿಂಗಾಯಿತ,ವೀರಶೈವ ಸಮುದಾಯದ ಮುಖಂಡರುಗಳು ನಗರದ ಟೌನ್‌ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.


    Provided by
    Provided by

    ಪ್ರತಿಭಟನಾನಿರತ ವೀರಶೈವ,ಲಿಂಗಾಯಿತ ಸಮುದಾಯದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕತೊಟ್ಲುಕೆರೆಯ ಶ್ರೀಅಟವಿ ಶಿವಲಿಂಗಸ್ವಾಮೀಜಿ,ಗೊಲ್ಲಹಳ್ಳಿಮಠದ ಶ್ರೀವೀಭವ ವಿದ್ಯಾಶಂಕರ ಸ್ವಾಮೀಜಿ, ಮಾಕನಹಳ್ಳಿ ಮಠದ ಶ್ರೀಗಂಗಾಧರ ಸ್ವಾಮೀಜಿ, ಬೆಳ್ಳಾವಿಯ ಶ್ರೀಕಾರದೇಶ್ವರ ಮಠದ ಶ್ರೀಕಾರದ ವೀರಬಸವಸ್ವಾಮೀಜಿ, ಶ್ರೀರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಹರಳೂರು ಮಠದ ಶ್ರೀ ಚನ್ನಬಸವಸ್ವಾಮೀಜಿಗಳು, ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ವೀರಶೈವ, ಲಿಂಗಾಯಿತರು ಸೇರಿದ್ದಾರೆ.ಆದರೆ ಕೇಂದ್ರದ ಪಟ್ಟಿಯಲ್ಲಿ ಇಲ್ಲ.ಇದರಿಂದ ಯುಪಿಎಸ್ಸಿ,ಸೇರಿದಂತೆ ಕೇಂದ್ರ ಸರಕಾರದ ಉದ್ಯೋಗಗಳಲ್ಲಿ ವೀರಶೈವ ಲಿಂಗಾಯಿತ ಸಮುದಾಯಕ್ಕೆ ಸೇರಿದ ಉಪಪಂಗಡಗಳಿಗೆ ತೀವ್ರ ಅನ್ಯಾಯವಾಗುತ್ತಿದ್ದು,ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೂಡಲೇ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ನಮ್ಮೆಲ್ಲಾ ವೀರಶೈವ,ಲಿಂಗಾಯಿತ ಸಮುದಾಯದ ಉಪಪಂಗಡಗಳ ಒತ್ತಾಯವಾಗಿದೆ ಎಂದರು.

    ವೀರಶೈವ, ಲಿಂಗಾಯಿತ ಸಮುದಾಯವು ಬಹುತೇಕ ಕೃಷಿ ಮತ್ತು ಕೃಷಿಯಾಧಾರಿತ ಕಸುಬುಗಳನ್ನು ಅವಲಂಬಿಸಿದ್ದು, ಆರ್ಥಿಕವಾಗಿ,ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯವಾಗಿದ್ದು,ಕೇಂದ್ರದ ಓಬಿಸಿ ಪಟ್ಟಿಗೆ ಸೇರದ ಕಾರಣ ಹಲವಾರು ದಶಕಗಳಿಂದ ಕೇಂದ್ರ ಸರಕಾರದ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತು ಕೇಂದ್ರದ ನೇಮಕಾತಿಗಳಿಂದ ವಂಚಿತ ವಾಗಿವೆ. ಆದರೆ ೧೪-೦೯-೧೯೯೪ರಲ್ಲಿ ಕೇಂದ್ರದ ಓಬಿಸಿ ಪಟ್ಟಿಗೆ ವೀರಶೈವ,ಲಿಂಗಾಯಿತ ಸಮುದಾಯಕ್ಕೆ ಸೇರಿದ ೧೬ ಉಪ ಪಂಗಡಗಳನ್ನು ಸೇರಿಸಲಾಗಿದೆ.ಆದೇ ರೀತಿ ಉಳಿದ ಉಪಪಂಗಡಗಳನ್ನು ಓಬಿಸಿ ಪಟ್ಟಿಗೆ ಸೇರಿಸುವ ಮೂಲಕ ಆ ಸಮುದಾಯಗಳು ಮೀಸಲಾತಿಯ ಲಾಭ ಪಡೆಯಲು ಅವಕಾಶ ಕಲ್ಪಿಸಬೇಕೆಂಬುದು ಅಖಿಲ ಭಾರತ ವೀರಶೈವ, ಲಿಂಗಾಯಿತ ಮಹಾಸಭಾದ ಒತ್ತಾಯವಾಗಿದೆ ಎಂದು ಶ್ರೀಗಳು ತಿಳಿಸಿದರು.

    ಈ ವಿಚಾರವಾಗಿ ೨೦೧೯ರಲ್ಲಿ ಎರಡು ಬಾರಿ ಮತ್ತು ೨೦೨೧ರಲ್ಲಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.ಆದರೆ ಇದುವರೆಗೂ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸರಕಾರದ ಈ ವಿಳಂಬದಿಂದಾಗಿ ನಮ್ಮ ಮಕ್ಕಳ ಉನ್ನತ ಹುದ್ದೆಗಳ ಕನಸು ಈಡೇರುವ ಲಕ್ಷಣಗಳಿಲ್ಲ.ಇಂದು ಕೂಡ ನಾವು ಸರಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ.ಒಂದು ವೇಳೆ ಸರಕಾರ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುತ್ತಿಗೆಯಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

    ವೀರಶೈವ, ಲಿಂಗಾಯಿತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಬೇಕೆಂಬ ಒತ್ತಾಯಕ್ಕೆ ರಾಜ್ಯದ ಎಲ್ಲಾ ವೀರಶೈವ,ಲಿಂಗಾಯಿತ ಮಠಾಧೀಶರುಗಳು ಸಹಮತ ವ್ಯಕ್ತಪಡಿಸಿದ್ದು,ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಮನವಿ ಪತ್ರಕ್ಕೆ ಸಹಿ ಹಾಕುವ ಮೂಲಕ ಸರಕಾರಕ್ಕೆ ಒತ್ತಾಯವನ್ನು ಮಾಡಿದ್ದಾರೆ.ಯುಪಿಎಸ್‌ಸಿ,ರೈಲ್ವೆ,ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರಿ ನೇಮಕಾತಿಗಳಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ದ ಹೋರಾಟ ಅನಿವಾರ್ಯ ಎಂದು ಸ್ವಾಮೀಜಿಗಳು ನುಡಿದರು.

    ಪ್ರತಿಭಟನೆಯಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಪಾವರ್ತಿ ಕ.ರೆಡ್ಡಿ,ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ ಪಟೇಲ್,ಪ್ರಧಾನಕಾರ್ಯದರ್ಶಿ ಕೆ.ಟಿ.ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷರುಗಳಾದ  ಎಸ್.ಡಿ.ದಿಲೀಪ್, ಚಂದ್ರಮೌಳಿ,ಜಯರಾಂ,ಕೋಶಾಧ್ಯಕ್ಷರಾದ ಎಂ.ಬಿ.ಶೇಖರ್, ರಾಷ್ಟ್ರೀಯಯಸಮಿತಿ ಸದಸ್ಯರಾದ ರಾಜಶೇಖರ್, ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ವೀರಶೈವ,ಲಿಂಗಾಯಿತ ಕ್ಷೇತ್ರಗಳ ಮುಖಂಡರು ಪಾಲ್ಗೊಂಡಿದ್ದರು.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ನವದೆಹಲಿ/ಬೆಂಗಳೂರು: ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ದೆಹಲಿಯ…

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.