nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯೇಸುಕ್ರಿಸ್ತ – ಕ್ರೈಸ್ತ ಧರ್ಮ – ಪ್ರೀತಿ – ಸೇವೆ – ಮತಾಂತರ – ಕೆಲವು ಹಿಂದೂಗಳ ವಿರೋಧ – ಹೊಸ ಕಾನೂನು 
    ಲೇಖನ December 25, 2021

    ಯೇಸುಕ್ರಿಸ್ತ – ಕ್ರೈಸ್ತ ಧರ್ಮ – ಪ್ರೀತಿ – ಸೇವೆ – ಮತಾಂತರ – ಕೆಲವು ಹಿಂದೂಗಳ ವಿರೋಧ – ಹೊಸ ಕಾನೂನು 

    By adminDecember 25, 2021No Comments3 Mins Read
    yesu crista

    namma tumakuru

    ಎಲ್ಲರಿಗೂ ಕ್ರಿಸ್ ಮಸ್ ಹಬ್ಬದ ಶುಭಾಶಯಗಳನ್ನು ಹೇಳುತ್ತಾ…..

    ಒಂದು ವಿಚಿತ್ರ ಸನ್ನಿವೇಶದಲ್ಲಿ ನಾವಿದ್ದೇವೆ. ಜಗತ್ತಿಗೆ ಶಾಂತಿ ಪ್ರೀತಿ ಸೇವೆ ಎಂಬ ಮಹತ್ವದ ಮಾರ್ಗಗಳನ್ನು ಪರಿಣಾಮಕಾರಿಯಾಗಿ ಹೇಳಿದ ಜೀಸಸ್ ಜನ್ಮದಿನದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದಿಂದ ಮತಾಂತರ ನಿಷೇಧ ಕಾನೂನು ಜಾರಿ ಮಾಡಲಾಯಿತು ಮತ್ತು ಅದೂ ಬಹುತೇಕ ಕ್ರಿಶ್ಚಿಯನ್ ಧರ್ಮದ ಮೇಲಿನ ಆರೋಪಗಳಿಗೆ ಉತ್ತರ ಹಾಗು ಸವಾಲಿನ ರೂಪದಲ್ಲಿ…

    ಭಾರತದ ಮಟ್ಟಿಗೆ ಮತಾಂತರದ ಆರೋಪ ಹೆಚ್ಚಾಗಿ ಕೇಳಿಬರುತ್ತಿರುವುದು ಯೇಸುಕ್ರಿಸ್ತನ ಅನುಯಾಯಿಗಳ ಮೇಲೆಯೇ…

    ಹಣ ಉದ್ಯೋಗ ಸಮಾನತೆ ಇತ್ಯಾದಿ ಇತ್ಯಾದಿ ಆಮಿಷಗಳಿಗೆ ಹಾಗು ಇದರ ಪರೋಕ್ಷ ಪರಿಣಾಮ ಕೆಲವು ಹಿಂದುಗಳ ತುಳಿತಕ್ಕೊಳಗಾದವರು ಸ್ವಯಂ ಪ್ರೇರಣೆಯಿಂದ ಮತಾಂತರವಾಗುತ್ತಿದ್ದಾರೆ. ಹೀಗೇ ಇದು ಮುಂದುವರಿದರೆ ಹಿಂದೂಗಳ ಜನಸಂಖ್ಯೆಗೆ ಅಪಾಯ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಒಂದು ಪ್ರಯತ್ನ ಎಂಬ ವಾದ. ಹಾಗೆಯೇ ಇದು ಕ್ರೈಸ್ತ ಸಮುದಾಯದ ಮೇಲಿನ ದೌರ್ಜನ್ಯ. ಅದನ್ನು ವಿರೋಧಿಸುತ್ತೇವೆ ಎಂಬುದು ಮತ್ತೆ ಕೆಲವರ ಅಭಿಪ್ರಾಯ…

    ” ನಿಮ್ಮ ಶತ್ರುಗಳನ್ನು ಸಹ ಪ್ರೀತಿಸಿ,
    ನಿಮ್ಮ ನೆರೆಹೊರೆಯವರನ್ನು ಪ್ರೀತಿಸಿ,
    ಅಸಹಾಯಕರಿಗೆ ನಿಸ್ವಾರ್ಥ ಸೇವೆ ಸಲ್ಲಿಸಿ ” ಈ ಕೆಲವು ಸಂದೇಶಗಳು ಜೀಸಸ್ ಅವರ ಮನದಾಳದ ಮಾತುಗಳು.

    ಹಾಗೆಯೇ ತನ್ನನ್ನು ಶಿಲುಬೆಗೇರಿಸಿದ ಜನರನ್ನೇ ಕ್ಷಮಿಸಿ, ಪಾಪ ಅವರಿಗೆ ತಾವೇನು ಮಾಡುತ್ತಿದ್ದೇವೆ ಎಂಬ ಅರಿವಿಲ್ಲ. ಅವರು ಮುಗ್ಧರು ಮತ್ತು ಕ್ಷಮೆಗೆ ಅರ್ಹರು ಎಂದೇ ಪ್ರತಿಪಾದಿಸಿದ ಕ್ಷಮಾ ಗುಣದ ಪ್ರತಿರೂಪ – ಶಾಂತಿ ದೂತ ಜೀಸಸ್.

    ಇಂತಹ ಶಾಂತಿ ದೂತನ ಅನುಯಾಯಿಗಳ ಮೇಲೆ ಮತಾಂತರದ ಆರೋಪ ಬಂದಾಗ ಅದನ್ನು ದಿಟ್ಟತನದಿಂದ ಎದುರಿಸಿ ” ನಮಗೆ ಮತಾಂತರ ಮುಖ್ಯವಲ್ಲ. ನಮಗೆ ಕ್ರಿಶ್ಚಿಯನ್ ಧರ್ಮ ಮುಖ್ಯವಲ್ಲ. ನಮಗೆ ಮನುಷ್ಯ ಮುಖ್ಯ. ಶೋಷಿತರು ಯಾರೇ ಆಗಲಿ ಅಸಹಾಯಕರು ಯಾರೇ ಇರಲಿ ಅವರ ಸೇವೆ ಮಾತ್ರ ನಮ್ಮ ಉದ್ದೇಶ. ಮತಾಂತರ ನಿಷೇಧ ಕಾನೂನು ಮಾತ್ರವಲ್ಲ ಅದಕ್ಕಿಂತ ಕಠಿಣ ಕಾನೂನು ಜಾರಿಯಾದರು ನಮಗೆ ಹೆದರಿಕೆ ಇಲ್ಲ. ನಮಗೆ ಸಮಾನತೆ ಮಾನವೀಯ ಮೌಲ್ಯಗಳ ಸೇವೆ ಮಾತ್ರ ಮುಖ್ಯ ” ಎನ್ನುವ ಔದಾರ್ಯ ಯೇಸುಕ್ರಿಸ್ತನ ಅನುಯಾಯಿಗಳಿಂದ ಬರಬೇಕಿತ್ತು. ಅದೇ ನಿಜವಾಗಿಯೂ ಶಾಂತಿ ಸೌಹಾರ್ದತೆಗೆ ಜೀಸಸ್ ಅನುಯಾಯಿಗಳು ಕೊಡಬಹುದಾದ ದೊಡ್ಡ ಕೊಡುಗೆ…

    ಒಂದು ವೇಳೆ ಹೀಗೆ ಹೇಳಿದ್ದರೆ ಖಂಡಿತ ಕರ್ಮಠ ಮೂಲಭೂತವಾದಿಗಳು ತಲೆ ತಗ್ಗಿಸುವಂತಾಗುತ್ತಿತ್ತು. ಧರ್ಮದ ನಿಜವಾದ ಪಾಲನೆ ಆಗುತ್ತಿತ್ತು. ಧರ್ಮದ ತಿಳಿವಳಿಕೆ ನಡವಳಿಕೆ ಆದಾಗ ಮಾತ್ರ ಅದಕ್ಕೆ ಅರ್ಥ. ಇಲ್ಲದಿದ್ದರೆ….

    ಹಾಗೆಯೇ ಹಿಂದು ನಾವೆಲ್ಲರೂ ಒಂದು ಎಂದು ಅಭಿಮಾನದಿಂದ ಹೇಳುವವರು ಮತಾಂತರಕ್ಕೆ ಭಯಪಟ್ಟು ಕಾನೂನಿನ ಮೂಲಕ ನಿಯಂತ್ರಿಸುವಷ್ಟು ಹತಾಶರಾಗಿರುವುದು ಸಹ ಅತ್ಯಂತ ನಾಚಿಕೆಗೇಡು. ಹಿಂದುಗಳು ಮತಾಂತರ ಆಗಲು ಕಾರಣ ಹುಡುಕುವ ಆತ್ಮಾವಲೋಕನ ಮಾಡಿಕೊಳ್ಳಬೇಕು.

    ಜಾತಿಯ ಮೂಲಕ ಅಸ್ಪೃಶ್ಯತೆ ಆಚರಿಸುವುದು, ಜಾತಿಯ ಮೂಲಕ ಮೇಲು ಕೀಳು ವ್ಯಕ್ತಿತ್ವ ನಿರ್ಧರಿಸುವುದು, ಜಾತಿಯ ಮೂಲಕ ಮದುವೆ ಆಗುವುದು, ಜಾತಿಯ ಮೂಲಕ ಚುನಾವಣೆಗೆ ಸ್ಪರ್ಧಿಸುವುದು ಮತ್ತು ಮತ ಕೇಳುವುದು, ಜಾತಿಯ ಆಧಾರದ ಮೇಲೆ ಪಂಕ್ತಿ ಭೇದ ಮಾಡುವುದು ಮುಂತಾದ ಅನಿಷ್ಟಗಳು ಇನ್ನೂ ಈ ಸಮಾಜದಲ್ಲಿ ಜೀವಂತ ಇರುವಾಗ ಮತಾಂತರ ನಿಷೇಧಿಸುವ ನೈತಿಕತೆ ಎಲ್ಲಿದೆ..

    ಇತರೆ ಧರ್ಮಗಳ ಕೆಲವು ಕೆಟ್ಟ ಆಚರಣೆಗಳನ್ನು ಉದಾಹರಿಸಿ ನಮ್ಮ ಧರ್ಮದ ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಳ್ಳುವುದು ಒಳ್ಳೆಯ ಬೆಳವಣಿಗೆಯಲ್ಲ. ಅದನ್ನು ಸಾಕಷ್ಟು ಜನ ನಿರಂತರವಾಗಿ ಮಾಡುತ್ತಲೇ ಇದ್ದಾರೆ.

    ಒಂದು ಧರ್ಮದ ನಿಜವಾದ ಶಕ್ತಿ ಸಾಮರ್ಥ್ಯ ಆಕರ್ಷಣೆ ಇರುವುದೇ ಅದರ ಸರಳತೆ ಸಮಾನತೆ ಮಾನವೀಯತೆಯ ಆಚರಣೆಗಳಲ್ಲಿ. ಅದನ್ನು ಅನುಸರಿಸುವ ಆ ಧರ್ಮದ ಅನುಯಾಯಿಗಳ ನಡವಳಿಕೆಗಳಲ್ಲಿ. ಅದನ್ನು ಸರಿಯಾಗಿ ಪಾಲಿಸಿ ಇತರ ಧರ್ಮಗಳಿಗೆ ಮಾದರಿಯಾಗದೆ ಒಂದು ಧರ್ಮ ಮತಾಂತರಕ್ಕೆ ಪ್ರಚೋದಿಸುವುದು, ಇನ್ನೊಂದು ಧರ್ಮ ಅದನ್ನು ನಿಷೇಧಿಸುವುದು ಎರಡೂ ಒಳ್ಳೆಯ ನಡೆಯಲ್ಲ.

    ಏಕೆಂದರೆ ಕಾನೂನಿನ ಮೂಲಕವೇ ಎಲ್ಲವನ್ನೂ ನಿಯಂತ್ರಿಸಲು ಸಾಧ್ಯವಿಲ್ಲ. ಪಕ್ಷಾಂತರ ನಿಷೇಧ ಕಾನೂನಿನ ದುರುಪಯೋಗವಾದಂತೆ ನಾಳೆ ಈ ಮತಾಂತರ ನಿಷೇಧ ಕಾನೂನಿನ ಒಳ ಲಾಭ ಪಡೆದು ಇಡೀ ಸಮುದಾಯಗಳೇ ಕಾನೂನಿನ ಅಡಿಯಲ್ಲಿ ಮತಾಂತರವಾದರೆ ಏನು ಮಾಡುವುದು. ಅದಕ್ಕಾಗಿಯೇ ಮೊದಲು ಸಮ ಸಮಾಜದ ಮಾನವೀಯ ಹಿನ್ನೆಲೆಯ ಸರಳ ಧರ್ಮ ನಮ್ಮದಾಗಬೇಕು.

    ಕ್ರಿಸ್ಮಸ್ ಹಬ್ಬದ ಈ ಸಂದರ್ಭದಲ್ಲಿ ಜಗತ್ತು ವೈರಸ್ ರೂಪಾಂತರ ತಳಿಗಳ ಅಬ್ಬರಕ್ಕೆ ಸಿಲುಕಿ ನಲುಗುತ್ತಿರುವಾಗ ಮತಾಂತರಗಳು ಮುಖ್ಯ ವಿಷಯವಾಗುತ್ತಿರುವುದು ಮಾನವ ಜನಾಂಗಕ್ಕೆ ” ವಿನಾಶ ಕಾಲೇ ವಿಪರೀತ ಬುದ್ದಿ ” ಎಂಬಂತಾಗಿದೆ. ಮಾಡಲು ಅತ್ಯಂತ ಪ್ರಮುಖ ಕೆಲಸಗಳು ನಮ್ಮ ಮುಂದೆ ಇರುವಾಗ ಎಲ್ಲಾ ಜನ ಪ್ರತಿನಿಧಿಗಳು ಮತಾಂತರದ ಬಗ್ಗೆ ಚರ್ಚೆ ಮಾಡುತ್ತಾ ಜನರ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯ ಖಂಡಿತ ಒಂದು ದೊಡ್ಡ ಅಪರಾಧಕ್ಕೆ ಸಹ. ಮತಗಳನ್ನು ಉಳಿಸುವುದು ಬೆಳೆಸುವುದು ಅನಾಗರೀಕ ಸಮಾಜದ ಗುಣಲಕ್ಷಣ.

    ಸಾಮಾನ್ಯ ಜನರಾದ ನಾವುಗಳು ಈಗ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆ. ಜೀಸಸ್ ಅಥವಾ ಪೈಗಂಬರ್ ಅಥವಾ ಭಗವದ್ಗೀತೆ ಅಥವಾ ಬುದ್ಧ ಮಹಾವೀರ ಯಾರೇ ಹೇಳಿರಲಿ ಶಾಂತಿ ಸಮಾನತೆ ಸೇವೆ ಮಾನವೀಯ ಮೌಲ್ಯಗಳೇ ನಾಗರಿಕ ಸಮಾಜದ ಬಹುಮುಖ್ಯ ಗುಣಲಕ್ಷಣಗಳು. ಅದನ್ನು ಉಳಿಸುವ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸೋಣ ಎಂಬ ಆಶಯದೊಂದಿಗೆ…

    ಮತ್ತೊಮ್ಮೆ ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು…

    ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
    ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
    ಮನಸ್ಸುಗಳ ಅಂತರಂಗದ ಚಳವಳಿ.
    ವಿವೇಕಾನಂದ. ಹೆಚ್.ಕೆ.
    9844013068.


    Provided by
    Provided by
    admin
    • Website

    Related Posts

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!

    July 8, 2026

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.