nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025
    Facebook Twitter Instagram
    ಟ್ರೆಂಡಿಂಗ್
    • ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ
    • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
    • ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು
    • ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್
    • ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ
    • ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರು ಬಿಡುಗಡೆ: ಹೂವಿನ ಹಾರ ಹಾಕಿ ಸ್ವಾಗತ
    • ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕು ಕಛೇರಿಗೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರಿಂದ ದಾಳಿ!
    • ತೋಟಗಾರಿಕೆ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯೇಸುಕ್ರಿಸ್ತ – ಕ್ರೈಸ್ತ ಧರ್ಮ – ಪ್ರೀತಿ – ಸೇವೆ – ಮತಾಂತರ – ಕೆಲವು ಹಿಂದೂಗಳ ವಿರೋಧ – ಹೊಸ ಕಾನೂನು 
    ಲೇಖನ December 25, 2021

    ಯೇಸುಕ್ರಿಸ್ತ – ಕ್ರೈಸ್ತ ಧರ್ಮ – ಪ್ರೀತಿ – ಸೇವೆ – ಮತಾಂತರ – ಕೆಲವು ಹಿಂದೂಗಳ ವಿರೋಧ – ಹೊಸ ಕಾನೂನು 

    By adminDecember 25, 2021No Comments3 Mins Read
    yesu crista

    namma tumakuru

    ಎಲ್ಲರಿಗೂ ಕ್ರಿಸ್ ಮಸ್ ಹಬ್ಬದ ಶುಭಾಶಯಗಳನ್ನು ಹೇಳುತ್ತಾ…..


    Provided by

    ಒಂದು ವಿಚಿತ್ರ ಸನ್ನಿವೇಶದಲ್ಲಿ ನಾವಿದ್ದೇವೆ. ಜಗತ್ತಿಗೆ ಶಾಂತಿ ಪ್ರೀತಿ ಸೇವೆ ಎಂಬ ಮಹತ್ವದ ಮಾರ್ಗಗಳನ್ನು ಪರಿಣಾಮಕಾರಿಯಾಗಿ ಹೇಳಿದ ಜೀಸಸ್ ಜನ್ಮದಿನದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದಿಂದ ಮತಾಂತರ ನಿಷೇಧ ಕಾನೂನು ಜಾರಿ ಮಾಡಲಾಯಿತು ಮತ್ತು ಅದೂ ಬಹುತೇಕ ಕ್ರಿಶ್ಚಿಯನ್ ಧರ್ಮದ ಮೇಲಿನ ಆರೋಪಗಳಿಗೆ ಉತ್ತರ ಹಾಗು ಸವಾಲಿನ ರೂಪದಲ್ಲಿ…

    ಭಾರತದ ಮಟ್ಟಿಗೆ ಮತಾಂತರದ ಆರೋಪ ಹೆಚ್ಚಾಗಿ ಕೇಳಿಬರುತ್ತಿರುವುದು ಯೇಸುಕ್ರಿಸ್ತನ ಅನುಯಾಯಿಗಳ ಮೇಲೆಯೇ…

    ಹಣ ಉದ್ಯೋಗ ಸಮಾನತೆ ಇತ್ಯಾದಿ ಇತ್ಯಾದಿ ಆಮಿಷಗಳಿಗೆ ಹಾಗು ಇದರ ಪರೋಕ್ಷ ಪರಿಣಾಮ ಕೆಲವು ಹಿಂದುಗಳ ತುಳಿತಕ್ಕೊಳಗಾದವರು ಸ್ವಯಂ ಪ್ರೇರಣೆಯಿಂದ ಮತಾಂತರವಾಗುತ್ತಿದ್ದಾರೆ. ಹೀಗೇ ಇದು ಮುಂದುವರಿದರೆ ಹಿಂದೂಗಳ ಜನಸಂಖ್ಯೆಗೆ ಅಪಾಯ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಒಂದು ಪ್ರಯತ್ನ ಎಂಬ ವಾದ. ಹಾಗೆಯೇ ಇದು ಕ್ರೈಸ್ತ ಸಮುದಾಯದ ಮೇಲಿನ ದೌರ್ಜನ್ಯ. ಅದನ್ನು ವಿರೋಧಿಸುತ್ತೇವೆ ಎಂಬುದು ಮತ್ತೆ ಕೆಲವರ ಅಭಿಪ್ರಾಯ…

    ” ನಿಮ್ಮ ಶತ್ರುಗಳನ್ನು ಸಹ ಪ್ರೀತಿಸಿ,
    ನಿಮ್ಮ ನೆರೆಹೊರೆಯವರನ್ನು ಪ್ರೀತಿಸಿ,
    ಅಸಹಾಯಕರಿಗೆ ನಿಸ್ವಾರ್ಥ ಸೇವೆ ಸಲ್ಲಿಸಿ ” ಈ ಕೆಲವು ಸಂದೇಶಗಳು ಜೀಸಸ್ ಅವರ ಮನದಾಳದ ಮಾತುಗಳು.

    ಹಾಗೆಯೇ ತನ್ನನ್ನು ಶಿಲುಬೆಗೇರಿಸಿದ ಜನರನ್ನೇ ಕ್ಷಮಿಸಿ, ಪಾಪ ಅವರಿಗೆ ತಾವೇನು ಮಾಡುತ್ತಿದ್ದೇವೆ ಎಂಬ ಅರಿವಿಲ್ಲ. ಅವರು ಮುಗ್ಧರು ಮತ್ತು ಕ್ಷಮೆಗೆ ಅರ್ಹರು ಎಂದೇ ಪ್ರತಿಪಾದಿಸಿದ ಕ್ಷಮಾ ಗುಣದ ಪ್ರತಿರೂಪ – ಶಾಂತಿ ದೂತ ಜೀಸಸ್.

    ಇಂತಹ ಶಾಂತಿ ದೂತನ ಅನುಯಾಯಿಗಳ ಮೇಲೆ ಮತಾಂತರದ ಆರೋಪ ಬಂದಾಗ ಅದನ್ನು ದಿಟ್ಟತನದಿಂದ ಎದುರಿಸಿ ” ನಮಗೆ ಮತಾಂತರ ಮುಖ್ಯವಲ್ಲ. ನಮಗೆ ಕ್ರಿಶ್ಚಿಯನ್ ಧರ್ಮ ಮುಖ್ಯವಲ್ಲ. ನಮಗೆ ಮನುಷ್ಯ ಮುಖ್ಯ. ಶೋಷಿತರು ಯಾರೇ ಆಗಲಿ ಅಸಹಾಯಕರು ಯಾರೇ ಇರಲಿ ಅವರ ಸೇವೆ ಮಾತ್ರ ನಮ್ಮ ಉದ್ದೇಶ. ಮತಾಂತರ ನಿಷೇಧ ಕಾನೂನು ಮಾತ್ರವಲ್ಲ ಅದಕ್ಕಿಂತ ಕಠಿಣ ಕಾನೂನು ಜಾರಿಯಾದರು ನಮಗೆ ಹೆದರಿಕೆ ಇಲ್ಲ. ನಮಗೆ ಸಮಾನತೆ ಮಾನವೀಯ ಮೌಲ್ಯಗಳ ಸೇವೆ ಮಾತ್ರ ಮುಖ್ಯ ” ಎನ್ನುವ ಔದಾರ್ಯ ಯೇಸುಕ್ರಿಸ್ತನ ಅನುಯಾಯಿಗಳಿಂದ ಬರಬೇಕಿತ್ತು. ಅದೇ ನಿಜವಾಗಿಯೂ ಶಾಂತಿ ಸೌಹಾರ್ದತೆಗೆ ಜೀಸಸ್ ಅನುಯಾಯಿಗಳು ಕೊಡಬಹುದಾದ ದೊಡ್ಡ ಕೊಡುಗೆ…

    ಒಂದು ವೇಳೆ ಹೀಗೆ ಹೇಳಿದ್ದರೆ ಖಂಡಿತ ಕರ್ಮಠ ಮೂಲಭೂತವಾದಿಗಳು ತಲೆ ತಗ್ಗಿಸುವಂತಾಗುತ್ತಿತ್ತು. ಧರ್ಮದ ನಿಜವಾದ ಪಾಲನೆ ಆಗುತ್ತಿತ್ತು. ಧರ್ಮದ ತಿಳಿವಳಿಕೆ ನಡವಳಿಕೆ ಆದಾಗ ಮಾತ್ರ ಅದಕ್ಕೆ ಅರ್ಥ. ಇಲ್ಲದಿದ್ದರೆ….

    ಹಾಗೆಯೇ ಹಿಂದು ನಾವೆಲ್ಲರೂ ಒಂದು ಎಂದು ಅಭಿಮಾನದಿಂದ ಹೇಳುವವರು ಮತಾಂತರಕ್ಕೆ ಭಯಪಟ್ಟು ಕಾನೂನಿನ ಮೂಲಕ ನಿಯಂತ್ರಿಸುವಷ್ಟು ಹತಾಶರಾಗಿರುವುದು ಸಹ ಅತ್ಯಂತ ನಾಚಿಕೆಗೇಡು. ಹಿಂದುಗಳು ಮತಾಂತರ ಆಗಲು ಕಾರಣ ಹುಡುಕುವ ಆತ್ಮಾವಲೋಕನ ಮಾಡಿಕೊಳ್ಳಬೇಕು.

    ಜಾತಿಯ ಮೂಲಕ ಅಸ್ಪೃಶ್ಯತೆ ಆಚರಿಸುವುದು, ಜಾತಿಯ ಮೂಲಕ ಮೇಲು ಕೀಳು ವ್ಯಕ್ತಿತ್ವ ನಿರ್ಧರಿಸುವುದು, ಜಾತಿಯ ಮೂಲಕ ಮದುವೆ ಆಗುವುದು, ಜಾತಿಯ ಮೂಲಕ ಚುನಾವಣೆಗೆ ಸ್ಪರ್ಧಿಸುವುದು ಮತ್ತು ಮತ ಕೇಳುವುದು, ಜಾತಿಯ ಆಧಾರದ ಮೇಲೆ ಪಂಕ್ತಿ ಭೇದ ಮಾಡುವುದು ಮುಂತಾದ ಅನಿಷ್ಟಗಳು ಇನ್ನೂ ಈ ಸಮಾಜದಲ್ಲಿ ಜೀವಂತ ಇರುವಾಗ ಮತಾಂತರ ನಿಷೇಧಿಸುವ ನೈತಿಕತೆ ಎಲ್ಲಿದೆ..

    ಇತರೆ ಧರ್ಮಗಳ ಕೆಲವು ಕೆಟ್ಟ ಆಚರಣೆಗಳನ್ನು ಉದಾಹರಿಸಿ ನಮ್ಮ ಧರ್ಮದ ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಳ್ಳುವುದು ಒಳ್ಳೆಯ ಬೆಳವಣಿಗೆಯಲ್ಲ. ಅದನ್ನು ಸಾಕಷ್ಟು ಜನ ನಿರಂತರವಾಗಿ ಮಾಡುತ್ತಲೇ ಇದ್ದಾರೆ.

    ಒಂದು ಧರ್ಮದ ನಿಜವಾದ ಶಕ್ತಿ ಸಾಮರ್ಥ್ಯ ಆಕರ್ಷಣೆ ಇರುವುದೇ ಅದರ ಸರಳತೆ ಸಮಾನತೆ ಮಾನವೀಯತೆಯ ಆಚರಣೆಗಳಲ್ಲಿ. ಅದನ್ನು ಅನುಸರಿಸುವ ಆ ಧರ್ಮದ ಅನುಯಾಯಿಗಳ ನಡವಳಿಕೆಗಳಲ್ಲಿ. ಅದನ್ನು ಸರಿಯಾಗಿ ಪಾಲಿಸಿ ಇತರ ಧರ್ಮಗಳಿಗೆ ಮಾದರಿಯಾಗದೆ ಒಂದು ಧರ್ಮ ಮತಾಂತರಕ್ಕೆ ಪ್ರಚೋದಿಸುವುದು, ಇನ್ನೊಂದು ಧರ್ಮ ಅದನ್ನು ನಿಷೇಧಿಸುವುದು ಎರಡೂ ಒಳ್ಳೆಯ ನಡೆಯಲ್ಲ.

    ಏಕೆಂದರೆ ಕಾನೂನಿನ ಮೂಲಕವೇ ಎಲ್ಲವನ್ನೂ ನಿಯಂತ್ರಿಸಲು ಸಾಧ್ಯವಿಲ್ಲ. ಪಕ್ಷಾಂತರ ನಿಷೇಧ ಕಾನೂನಿನ ದುರುಪಯೋಗವಾದಂತೆ ನಾಳೆ ಈ ಮತಾಂತರ ನಿಷೇಧ ಕಾನೂನಿನ ಒಳ ಲಾಭ ಪಡೆದು ಇಡೀ ಸಮುದಾಯಗಳೇ ಕಾನೂನಿನ ಅಡಿಯಲ್ಲಿ ಮತಾಂತರವಾದರೆ ಏನು ಮಾಡುವುದು. ಅದಕ್ಕಾಗಿಯೇ ಮೊದಲು ಸಮ ಸಮಾಜದ ಮಾನವೀಯ ಹಿನ್ನೆಲೆಯ ಸರಳ ಧರ್ಮ ನಮ್ಮದಾಗಬೇಕು.

    ಕ್ರಿಸ್ಮಸ್ ಹಬ್ಬದ ಈ ಸಂದರ್ಭದಲ್ಲಿ ಜಗತ್ತು ವೈರಸ್ ರೂಪಾಂತರ ತಳಿಗಳ ಅಬ್ಬರಕ್ಕೆ ಸಿಲುಕಿ ನಲುಗುತ್ತಿರುವಾಗ ಮತಾಂತರಗಳು ಮುಖ್ಯ ವಿಷಯವಾಗುತ್ತಿರುವುದು ಮಾನವ ಜನಾಂಗಕ್ಕೆ ” ವಿನಾಶ ಕಾಲೇ ವಿಪರೀತ ಬುದ್ದಿ ” ಎಂಬಂತಾಗಿದೆ. ಮಾಡಲು ಅತ್ಯಂತ ಪ್ರಮುಖ ಕೆಲಸಗಳು ನಮ್ಮ ಮುಂದೆ ಇರುವಾಗ ಎಲ್ಲಾ ಜನ ಪ್ರತಿನಿಧಿಗಳು ಮತಾಂತರದ ಬಗ್ಗೆ ಚರ್ಚೆ ಮಾಡುತ್ತಾ ಜನರ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯ ಖಂಡಿತ ಒಂದು ದೊಡ್ಡ ಅಪರಾಧಕ್ಕೆ ಸಹ. ಮತಗಳನ್ನು ಉಳಿಸುವುದು ಬೆಳೆಸುವುದು ಅನಾಗರೀಕ ಸಮಾಜದ ಗುಣಲಕ್ಷಣ.

    ಸಾಮಾನ್ಯ ಜನರಾದ ನಾವುಗಳು ಈಗ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆ. ಜೀಸಸ್ ಅಥವಾ ಪೈಗಂಬರ್ ಅಥವಾ ಭಗವದ್ಗೀತೆ ಅಥವಾ ಬುದ್ಧ ಮಹಾವೀರ ಯಾರೇ ಹೇಳಿರಲಿ ಶಾಂತಿ ಸಮಾನತೆ ಸೇವೆ ಮಾನವೀಯ ಮೌಲ್ಯಗಳೇ ನಾಗರಿಕ ಸಮಾಜದ ಬಹುಮುಖ್ಯ ಗುಣಲಕ್ಷಣಗಳು. ಅದನ್ನು ಉಳಿಸುವ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸೋಣ ಎಂಬ ಆಶಯದೊಂದಿಗೆ…

    ಮತ್ತೊಮ್ಮೆ ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳು…

    ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
    ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
    ಮನಸ್ಸುಗಳ ಅಂತರಂಗದ ಚಳವಳಿ.
    ವಿವೇಕಾನಂದ. ಹೆಚ್.ಕೆ.
    9844013068.

    admin
    • Website

    Related Posts

    ನಿಜವಾದ ದಾನಿ

    April 4, 2025

    ರಾಜನ ಹಿಂದಿನ ಜನುಮ

    April 2, 2025

    ಏಪ್ರಿಲ್ 1: ಪ್ರತಿ ನಿತ್ಯವೂ ನಾವು ಫೂಲ್ ಗಳಾಗುತ್ತೇವೆ

    April 1, 2025
    Our Picks

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಸಿಕ್ಕಿಂ ಭೂಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಐದು ಸೇನಾ ಸಿಬ್ಬಂದಿಯ ಪೈಕಿ ಒಬ್ಬರ ಮೃತದೇಹ ಪತ್ತೆ

    June 9, 2025

    ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ರೆ ಬಿಜೆಪಿ ಪ್ರತಿಕ್ರಿಯಿಸುತ್ತಿದೆ: ಸಂಜಯ್ ರಾವತ್ ಕಿಡಿ

    June 9, 2025

    ರೈಲಿನಿಂದ ಹಳಿಯ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವು!

    June 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.…

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025

    ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್

    June 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.