nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026

    ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ

    September 2, 2026
    Facebook Twitter Instagram
    ಟ್ರೆಂಡಿಂಗ್
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    • ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ
    • ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    • ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ
    • ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಸಾಗುವಳಿ ಚೀಟಿ ಕ್ರಮಬದ್ಧಗೊಳಿಸದಿದ್ದರೆ ಪ್ರತಿಭಟನೆ: ಸಿರಾ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ. ಸತ್ಯಪ್ರಕಾಶ್ ಎಚ್ಚರಿಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ
    ರಾಜ್ಯ ಸುದ್ದಿ December 29, 2021

    ಚಾಮರಾಜನಗರ ರೈತರಿಂದ ಏತ ನೀರಾವರಿ ಕಾಳೇಶ್ವರಂ ಯೋಜನೆ ವೀಕ್ಷಣೆ

    By adminDecember 29, 2021No Comments2 Mins Read
    yetha

    ಬೆಂಗಳೂರು: ನೆರೆಯ ತೆಲಂಗಾಣ ರಾಜ್ಯವು ಅನುಷ್ಠಾನಗೊಳಿಸಿರುವ ವಿಶ್ವದ ಅತಿ ದೊಡ್ಡ ಏತ ನೀರಾವರಿ ಯೋಜನೆ ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಚಾಮರಾಜನಗರ ರೈತರು ಕಂಡು ಹರ್ಷ ವ್ಯಕ್ತಪಡಿಸಿದ್ದು, ಯೋಜನೆಯ ಜಾರಿಯಿಂದ ರೈತರಿಗೆ ಆಗಿರುವ ಅನುಕೂಲಗಳನ್ನು ಪರಾಮರ್ಶಿಸಿದರು.

    ಕಾಳೇಶ್ವರಂ ಯೋಜನಾ ಪ್ರದೇಶದ ಪ್ರವಾಸ ಕೈಗೊಂಡಿರುವ ರೈತರು 2014ರಲ್ಲಿ ಚಾಮರಾಜನಗರದಲ್ಲಿ ಮೆಘಾ ಇಂಜಿನಿಯರಿಂಗ್ ಅಂಡ್ ಇನಾಸ್ಟ್ರಕ್ಚರ್ ಸಂಸ್ಥೆಯು ಯಶಸ್ವಿಯಾಗಿ ಜಾರಿ ಮಾಡಿರುವ ಆಲಂಬೂರು ಏತ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆ ನೀರು ಅಭಿವೃದ್ಧಿ ಸಂರಕ್ಷಣಾ ಸಮಿತಿ ಸದಸ್ಯರುಗಳಾಗಿದ್ದು, ತೆಲಂಗಾಣದ ಕಾಳೇಶ್ವರಂ ಯೋಜನಾ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ ಖುದ್ದು ಪರಿಶೀಲಿಸಿದರು.ಚಾಮರಾಜನಗರದ ಆಲಂಬೂರ್ ಸಮೀಪ ಅನುಷ್ಠಾನಗೊಂಡಿರುವ ಕೆರೆ ತುಂಬಿಸುವ ಯೋಜನೆ ಯಶಸ್ವಿನಿಂದ ಲಾಭ ಪಡೆದುಕೊಂಡಿರುವ ಇಲ್ಲಿನ ರೈತರ ತಂಡವು ಕಾಳೇಶ್ವರಂ ಯೋಜನೆಯ ಮೇಡಿಗಡ್ಡ ಮತ್ತು ಭೂತಲದಲ್ಲಿ ನಿರ್ಮಾಣಗೊಂಡಿರುವ ಗಾಯಿತ್ರಿ ಪಂಪ್‍ಹೌಸ್ ಸೇರಿದಂತೆ ಯೋಜನೆಯ ಅಳತೆ- ಆಕಾರ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ.ಯೋಜನೆ ಜಾರಿಯಿಂದ ಗುರುತ್ವಾಕರ್ಷಣ ದಿಕ್ಕಿಗೆ ಹರಿಯುತ್ತಿದ್ದ ಗೋದಾವರಿ ನದಿ ನೀರನ್ನು ತಂತ್ರಜ್ಞಾನದ ಸಮರ್ಥ ಅಳವಡಿಕೆ ಮೂಲಕ ಭೂತಲದ ಪಂಪ್‍ಹೌಸ್‍ಗಳಿಗೆ ಹರಿಸಿ 600 ಅಡಿಗಳಷ್ಟು ಎತ್ತರಕ್ಕೆ ಪಂಪ್ ಮಾಡುವ ಮೂಲಕ ವ್ಯರ್ಥವಾಗುತ್ತಿದ್ದ ನೀರಿನ ಸದ್ಬಳಕೆಯನ್ನು ಸಾಧ್ಯವಾಗಿಸಲಾಗಿದೆ.

    ಆಧುನಿಕ ತಂತ್ರಜ್ಞಾನದ ಬಳಕೆ ಮೂಲಕ ಜಾರಿಯಾಗಿರುವ ಕಾಳೇಶ್ವರಂ ಯೋಜನೆ ಮುಂದಿನ 10 ವರ್ಷಗಳಲ್ಲಿ ತೆಲಂಗಾಣ ರಾಜ್ಯದ ಚಿತ್ರಣವನ್ನೇ ಬದಲಿಸಲಿದೆ ಎಂದು ಹೇಳಲಾಗುತ್ತಿದೆ. ಈ ಯೋಜನೆಯನ್ನು ಖುದ್ದು ಕಂಡ ರಾಜ್ಯದ ರೈತರು ಕರ್ನಾಟಕವೂ ಸೇರಿದಂತೆ ದೇಶದ ಇತರೆಡೆಗಳನ್ನೂ ಇಂತಹ ಯೋಜನೆ ಮೂಲಕ ಕೃಷಿಗೆ ಒತ್ತು ನೀಡಬೇಕೆಂದು ಆಗ್ರಹಿಸಿದ್ದಾರೆ.

    ಚಾಮರಾಜನಗರದಲ್ಲೂ 2014ರಿಂದ ಆಲಂಬೂರು ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿದ್ದು, ಅನುಕೂಲವೂ ಆಗಿದೆ. ಆದರೆ ಇಲ್ಲಿ ಪ್ರತಿ ನಿತ್ಯ 2 ಟಿಎಂಸಿ ನೀರನ್ನು ನದಿಯಿಂದ ಎತ್ತುವುದು ಸಾಮಾನ್ಯವಾದ ಕೆಲಸವಲ್ಲ, ಇಂತಹ ಬೃಹತ್ ಕೆಲಸ ಇಲ್ಲಿ ಆಗಿದೆ. ಕರ್ನಾಟಕವೂ ಸೇರಿದಂತೆ ಇತರೆ ರಾಜ್ಯಗಳಲ್ಲೂ ಕಾಳೇಶ್ವರಂನಂತಹ ಯೋಜನೆಗಳನ್ನು ರೂಪಿಸುವ ಮೂಲಕ ಕೃಷಿಗೆ ಆದ್ಯತೆ ನೀಡಬೇಕು ಎಂಬುದು ರೈತ ಗುರುಮೂರ್ತಿ ಅವರ  ಅಭಿಪ್ರಾಯವಾಗಿದೆ. ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಸಚಿವರೂ ಬಂದು ನೋಡಿ, ನಮ್ಮ ರಾಜ್ಯದಲ್ಲೂ ಇಂತಹ ಯೋಜನೆಗಳನ್ನು ಜಾರಿ ಮಾಡಿದರೆ ರೈತ ಸಮುದಾಯಕ್ಕೆ ಒಳಿತಾಗಲಿದೆ. ದೇಶದ ಆಹಾರ ಸಮಸ್ಯೆಯೂ ನೀಗಲಿದೆ ಎಂದು ರೈತ ಎಂ. ಗುರುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಹೊಳೆನರಸೀಪುರ: “ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ” ಎಂಬ ಗಾದೆಯಂತೆ ಸ್ಥಳೀಯ ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಐತಿಹಾಸಿಕ…

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026

    ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ

    September 2, 2026

    ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.