nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ

    December 31, 2025

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
    • ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
    • ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ
    • ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
    • ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
    • ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
    • ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
    • ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎತ್ತಿನಹೊಳೆ ಯೋಜನೆ : ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಲು ಸೂಚನೆ
    ತುಮಕೂರು February 22, 2025

    ಎತ್ತಿನಹೊಳೆ ಯೋಜನೆ : ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಲು ಸೂಚನೆ

    By adminFebruary 22, 2025No Comments2 Mins Read
    parameshwar

    ತುಮಕೂರು:  ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಎತ್ತಿನಹೊಳೆ, ರೈಲ್ವೆ, ಹೇಮಾವತಿ, ಕೆಐಎಡಿಬಿ, ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ಈವರೆಗೂ 2679 ಎಕರೆ ಭೂಸ್ವಾಧೀನವಾಗಿದ್ದು, ಯೋಜನೆಗೆ ಅವಶ್ಯವಿರುವ ಉಳಿದ 438 ಎಕರೆ ಭೂಮಿಯನ್ನು 4 ತಿಂಗಳೊಳಗಾಗಿ ಸ್ವಾಧೀನಪಡಿಸಿಕೊಂಡು ಎತ್ತಿನ ಹೊಳೆ ಯೋಜನೆಗೆ ಹಸ್ತಾಂತರಿಸಬೇಕೆಂದು ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್ ಜಿ.ಎನ್. ಅವರಿಗೆ ಸೂಚನೆ ನೀಡಿದರು.


    Provided by
    Provided by

    ಲಭ್ಯವಿರುವ ಅನುದಾನವನ್ನು ಭೂಮಾಲೀಕರಿಗೆ ಪಾವತಿಸಿ ಎತ್ತಿನ ಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮುರಳೀಧರ್ ಅವರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

    ಎತ್ತಿನ ಹೊಳೆ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮುರಳೀಧರ್ ಸಚಿವರಿಗೆ ಮಾಹಿತಿ ನೀಡುತ್ತಾ, ಯೋಜನೆಯಡಿ ಜಿಲ್ಲೆಯಲ್ಲಿ 150 ಕಿ.ಮೀ. ಗುರುತ್ವಾ ಕಾಲುವೆಯನ್ನು ಹೊಂದಿದ್ದು, ಇದರಲ್ಲಿ 115 ಕಿ.ಮೀ.ವರೆಗಿನ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಉಳಿದ 24 ಕಿ.ಮೀ.ನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಹಾಗೂ 3 ಕಡೆ ಅರಣ್ಯ ಪ್ರದೇಶದ ಸಮಸ್ಯೆಯಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ ಸರಿಪಡಿಸಲಾಗುವುದು ಎಂದು ತಿಳಿಸಿದರು.

    ನಂತರ ಮಾತನಾಡಿದ ಸಚಿವರು, ತುಮಕೂರು–ರಾಯದುರ್ಗ ಯೋಜನೆಗಾಗಿ 1361 ಎಕರೆ ಪ್ರದೇಶವನ್ನು ರೈಲ್ವೆ ಇಲಾಖೆಗೆ ಈಗಾಗಲೇ ಹಸ್ತಾಂತರಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿದೆ. ಬಾಕಿ ಇರುವ 35 ಎಕರೆ ಭೂಮಿಯನ್ನು 45 ದಿನಗಳೊಳಗಾಗಿ ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಿದರು.

    ತುಮಕೂರು–ದಾವಣಗೆರೆ ರೈಲ್ವೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರೇಣುಕಾ ಪ್ರಸಾದ್ ಜಂಬಗಿ ಸಭೆಗೆ ಮಾಹಿತಿ ನೀಡುತ್ತಾ, ಈಗಾಗಲೇ 770 ಎಕರೆ ಭೂಮಿಯನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಶಿರಾ ಮತ್ತು ತುಮಕೂರು ತಾಲ್ಲೂಕಿನಲ್ಲಿ ಮಾತ್ರ 61 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಭೂ ಮಾಲೀಕರಿಗೆ ಪರಿಹಾರ ನೀಡಲು 20 ಕೋಟಿ ಅನುದಾನದ ಅವಶ್ಯಕತೆಯಿದೆ ಎಂದು ತಿಳಿಸಿದರು.

    ಭದ್ರಾ ಮೇಲ್ದಂಡೆ ಯೋಜನೆ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಬಾಕಿ ಇರುವ 576 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದು ನಿರ್ದೇಶನ ನೀಡಿದಾಗ ಉತ್ತರಿಸಿದ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸಂದೇಶ್ ಮಾತನಾಡಿ, ಸ್ವಾಧೀನಪಡಿಸಿಕೊಂಡ 308 ಎಕರೆ ಭೂ ಮಾಲೀಕರಿಗೆ ಪರಿಹಾರ ನೀಡುವ ಕಾರ್ಯ ಪ್ರಗತಿ ಹಂತದಲ್ಲಿದೆ. ಭದ್ರಾ ಮೇಲ್ದಂಡೆ ಯೋಜನೆಗಾಗಿ ಶಿರಾ ತಾಲ್ಲೂಕಿನಲ್ಲಿ 28 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಸ್ವಾಧೀನಪಡಿಸಿಕೊಂಡ 280 ಎಕರೆ ಪ್ರದೇಶದ ಭೂ ಮಾಲೀಕರಿಗೆ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

    ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯ ಯೋಜನೆಗಳು, ಕೊಳಗೇರಿ ಪ್ರದೇಶದ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

    ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ ಯೋಜನೆ ಹಾಗೂ ರೈಲ್ವೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025

    ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.

    December 31, 2025

    ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ

    December 31, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ

    December 31, 2025

    ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ ಮಧುಗಿರಿಯಿಂದ ಕೇಳಿಬರುವ ಏಕತೆಯ ಮೌನ ಸಂದೇಶ ಧರ್ಮವು ಮಾನವನನ್ನು ಒಗ್ಗೂಡಿಸಬೇಕಾದ ಶಕ್ತಿಯಾಗಬೇಕಾದರೆ, ಅದು…

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025

    ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.

    December 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.