nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    ಪಾವಗಡ September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    By adminSeptember 28, 2025No Comments2 Mins Read
    vamilki

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ವಿಗ್ರಹ ಅನಾವರಣ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಜನಪ್ರತಿನಿಧಿಗಳು ಹಾಗೂ ವಾಲ್ಮೀಕಿ ಸಮುದಾಯದ ಗಣ್ಯರು ಭಾಗವಹಿಸಿದರು.

    ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ವಹಿಸಿದ್ದರು.  ಮಾಜಿ ಸಚಿವ ಬಳ್ಳಾರಿ ಶ್ರೀರಾಮುಲು ಅವರು ಮಾತನಾಡಿ, “ವಾಲ್ಮೀಕಿ ಸಮುದಾಯದವರು ಪಕ್ಷಾತೀತವಾಗಿ ಸಮಾಜದ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಅಭಿವೃದ್ಧಿಗೆ ಒತ್ತುಕೊಡಬೇಕು. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರೋತ್ಸಾಹಿಸಬೇಕು” ಎಂದು ಕರೆ ನೀಡಿದರು.


    Provided by
    Provided by

    ಮಾಜಿ ಸಚಿವ ಹಾಗೂ ಹಾಲಿ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಅವರು, “ವಾಲ್ಮೀಕಿ ಸಮಾಜದಲ್ಲಿ ನಾಯಕತ್ವ ಹುಟ್ಟಿನಿಂದಲೇ ಇದೆ. ಆದರೆ ಜನರನ್ನು ಆಳುವಂತಹ ನಾಯಕರಾಗಲು ಶಿಕ್ಷಣವೇ ಪ್ರಮುಖ ಆಯುಧ. ಪ್ರತಿಯೊಬ್ಬರೂ ವಿದ್ಯಾಭ್ಯಾಸದಲ್ಲಿ ಶ್ರಮಿಸಬೇಕು” ಎಂದು ಸಲಹೆ ನೀಡಿದರು.

    ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು, “ವಾಲ್ಮೀಕಿ ಸಮಾಜವು ಎಲ್ಲಾ ಸಮುದಾಯಗಳಂತೆ ಉತ್ತಮ ಸ್ಥಾನಕ್ಕೆ ಬೆಳೆಯಬೇಕು. ಯಾವುದೇ ದ್ವೇಷದ ಕೆಲಸಕ್ಕೆ ಮುಂದಾಗದೆ ಸಾಮರಸ್ಯದಿಂದ ನಡೆದುಕೊಳ್ಳಬೇಕು. ವಾಲ್ಮೀಕಿ ಮಹರ್ಷಿಗಳಿಗೆ ವಿಧಾನಸೌಧದ ಮುಂದೆ ವಿಗ್ರಹ ಪ್ರತಿಷ್ಠಾಪನೆ ಮಾಡಿದ ಸಿದ್ದರಾಮಯ್ಯ ಹಾಗೂ ವಾಲ್ಮೀಕಿ ದಿನಾಚರಣೆಗೆ ರಜೆ ಘೋಷಿಸಿದ ಯಡಿಯೂರಪ್ಪರನ್ನು ಸ್ಮರಿಸಬೇಕು” ಎಂದು ಅಭಿಪ್ರಾಯ ಪಟ್ಟರು.

    ಮಾಜಿ ಸಚಿವ ವೆಂಕಟರಮಣಪ್ಪ ಅವರು, “ನಾಯಕ ಸಮಾಜವು ಪ್ರೀತಿಯಿಂದ ಎಲ್ಲ ಸಮಾಜಗಳೊಂದಿಗೆ ಬೆರೆತು ಬೆಳೆಯಬೇಕು. ರಾಜಣ್ಣ ಅವರ ಪದವಿ ಕಳೆದುಹೋಗಲು ಕೆಲವು ಶಕ್ತಿಗಳು ಷಡ್ಯಂತ್ರ ನಡೆಸಿದ್ದು ನೋವು ತಂದಿದೆ. ಆದರೂ ಸ್ನೇಹ-ಸೌಹಾರ್ದತೆಯಿಂದ ಮುಂದೆ ಸಾಗುತ್ತೇವೆ” ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ದೊರೆ ರಾಜ ಜಯಚಂದ್ರ ಶಾಸಕ ಎಚ್ ವಿ ವೆಂಕಟೇಶ್, ಇಇ ಅನಿಲ್ ಕುಮಾರ್, ಇಇ ಹನುಮಂತರಾಯಪ್ಪ,  ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಜಂಗಮಪ್ಪ, ಎಚ್.ತಿಮ್ಮಯ್ಯ, ಮಧುಸೂದನ್, ಉಪನ್ಯಾಸಕ ನಾಗರಾಜು, ಪುತ್ಥಳಿ ನಿರ್ಮಾತೃ ನವೀನ್ ಕುಮಾರ್, ಪುರಸಭೆ ಸದಸ್ಯರಾದ ಪಿ.ಎಚ್.ರಾಜೇಶ್ ರವಿ ಮುಖಂಡಗಳಾದ ಬ್ಯಾಡನೂರು ಶಿವು, ಕೆ.ರಾಂಪುರದ ಆನಂದ್, ರಂಗಮ್ಮ, ಶಿವಕುಮಾರ್, ಅಂಬಿಕಾ ರಮೇಶ್, ಎರ್ರಪ್ಪ ಸೇರಿದಂತೆ  ಸಮುದಾಯದ ಮುಖಂಡರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ,  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ…

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.