nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026
    Facebook Twitter Instagram
    ಟ್ರೆಂಡಿಂಗ್
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯೋಗದಿಂದ ಏಕಾಗ್ರತೆ, ಆರೋಗ್ಯ: ಯೋಗಪಟು ರಾಜೇಶ್ ಆಚಾರ್
    ತುಮಕೂರು March 25, 2025

    ಯೋಗದಿಂದ ಏಕಾಗ್ರತೆ, ಆರೋಗ್ಯ: ಯೋಗಪಟು ರಾಜೇಶ್ ಆಚಾರ್

    By adminMarch 25, 2025No Comments2 Mins Read
    tumakuru vv

    ತುಮಕೂರು: ಯೋಗ ಮಾಡುವುದರಿಂದ ಸದೃಢತೆ, ಏಕಾಗ್ರತೆ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆದರೆ ಇಂದಿನ ಯುವಜನತೆ ಯೋಗದಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ಯೋಗಪಟು ರಾಜೇಶ್ ಆಚಾರ್ ಹೇಳಿದರು.
    ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಸೋಮವಾರ ಹಮ್ಮಿಕೊಂಡಿದ್ದ ಅಂತರಕಾಲೇಜು ಸಾಂಪ್ರದಾಯಿಕ, ಕಲಾತ್ಮಕ ಮತ್ತು ಲಯಬದ್ಧ ಯೋಗದ ಕುರಿತ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು ಯೋಗ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದರು.

    ಯೋಗ ಮಾಡಲು ಕಡಿಮೆ ವೆಚ್ಚ ಸಾಕು. ಒಂದು ಮ್ಯಾಟ್. ಪರಿಶುದ್ಧ ವಾತಾವರಣ– ಇವಿಷ್ಟಿದ್ದರೆ ಗುರುಗಳ ಮಾರ್ಗದರ್ಶನದೊಂದಿಗೆ ಉತ್ತಮ ಯೋಗಾಭ್ಯಾಸ ಮಾಡಬಹುದು. ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

    ಪ್ರಾಧ್ಯಾಪಕರಾದ ಪ್ರೊ.ಶ್ರೀನಿವಾಸ್ ಎಸ್. ಮಾತನಾಡಿ, ಈಚಿನ ದಿನಗಳಲ್ಲಿ ಮನುಷ್ಯನಿಗೆ ಹೆಚ್ಚು ಕಾಯಿಲೆಗಳು ಬರುವುದಕ್ಕೆ ನಮ್ಮ ಕಳಪೆ ಆಹಾರ ಪದ್ಧತಿಯೇ ಕಾರಣ. ಮಕ್ಕಳು ಜಂಕ್ ಫುಡ್ ಗೆ ಆಕರ್ಷಿತರಾಗಿದ್ದಾರೆ. ಮಾರುಕಟ್ಟೆಯಲ್ಲಿ ಉತ್ಪಾದನೆಯಾಗುವ ಆಹಾರಗಳನ್ನು ಹೆಚ್ಚಾಗಿ ಸೇವಿಸುತ್ತೇವೆ. ಆದರೆ ಅದರ ಹಿಂದೆ ಕೊಟ್ಟಿರುವಂತಹ ವಿವರಗಳನ್ನು ನಾವು ಓದುವುದಿಲ್ಲ. ನಾವು ಭಾವಿಸಿದಂತೆ ಸಿದ್ಧ ಆಹಾರಗಳೆಲ್ಲವೂ ಶ್ರೇಷ್ಠವಲ್ಲ. ಅವುಗಳಲ್ಲಿ ಹೆಚ್ಚಿನ ರಾಸಾಯನಿಕಗಳನ್ನು ಬಳಸಲಾಗಿರುತ್ತದೆ. ಆದ್ದರಿಂದ ನಾವು ಏನು ತಿನ್ನಬೇಕು, ಏನು ತಿನ್ನಬಾರದು ಎಂಬುದನ್ನು ನಿರ್ಧರಿಸುವ ಸಾಮರ್ಥ್ಯವಿರಬೇಕು ಎಂದರು.

    ಪ್ರಾಧ್ಯಾಪಕರಾದ ಡಾ.ಶಾಲಿನಿ ಬಿ.ಆರ್. ಮಾತನಾಡಿ, ವಿದ್ಯಾರ್ಥಿಗಳು ಕೇವಲ ತರಗತಿಗಳಿಗೆ ಸೀಮಿತವಾಗದೆ, ಪ್ರತಿದಿನ ಒಂದು ಗಂಟೆಯನ್ನಾದರೂ ಯೋಗಕ್ಕೆ ಮೀಸಲಿಡಬೇಕು. ಪ್ರತಿದಿನ ಅರ್ಧ ಗಂಟೆ ಧ್ಯಾನ ಮಾಡಬೇಕು. ಸೂರ್ಯ ನಮಸ್ಕಾರ ಮಾಡುವುದರಿಂದ ಉತ್ತಮ ಆರೋಗ್ಯ ಸಾಧ್ಯ. ಆರೋಗ್ಯಯುತ ಜೀವನಶೈಲಿಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಕಾಶ್ ಎಂ. ಶೇಟ್ ಮಾತನಾಡಿ, ನಮ್ಮ ದೇಹಕ್ಕೆ ಬೇಕಾದ ಆಹಾರವನ್ನು ಮಾತ್ರ ಸೇವಿಸಬೇಕು. ಅನಗತ್ಯ ಆಹಾರವನ್ನು ಸೇವಿಸುವುದರಿಂದ ಆರೋಗ್ಯ ಹದಗೆಡುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯುವಕರು ಜಿಮ್ ಗೆ ಹೋಗುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಆದರೆ ಯೋಗವನ್ನು ಅಭ್ಯಾಸ ಮಾಡುವುದರಿಂದ ಮಿತವ್ಯಯದಲ್ಲಿ ಮನೆಯಲ್ಲೇ ಉತ್ತಮ ಆರೋಗ್ಯ ರೂಢಿಸಿಕೊಳ್ಳಬಹುದು ಎಂದರು.
    ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಡಾ. ಎ.ಎಂ. ಮಂಜುನಾಥ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ತುಮಕೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಸ್ವಯಂಪ್ರೇರಿತ ನಿಯಮ ಅನುಸರಣೆಯನ್ನು ಉತ್ತೇಜಿಸಲು, ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ…

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.