ಪಾವಗಡ: ದೇವರ ದರ್ಶನ ಪಡೆದು ಬೈಕ್ ನಲ್ಲಿ ಹಿಂದಿರುಗುತ್ತಿದ್ದ ಯುವಕನೋರ್ವ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಪಾವಗಡ ತಾಲ್ಲೂಕಿನ ನಿಡಗಲ್ ಹೋಬಳಿಯ ಕರೆಕ್ಯಾತನಹಳ್ಳಿ ಸ್ವಾರಮ್ಮ ದೇವಸ್ಥಾನದ ಸಮೀಪದ ಶಿರಾ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಪಾವಗಡ ತಾಲ್ಲೂಕಿನ ಅರಸೀಕೆರೆ ಗ್ರಾಮದ 28 ವರ್ಷದ ಕುಮಾರ್ ಎಂದು ಗುರುತಿಸಲಾಗಿದೆ. ಮೃತರು ವೃತ್ತಿಯಲ್ಲಿ ಜೆಸಿಬಿ ಡ್ರೈವರ್ ಆಗಿದ್ದರು ಎನ್ನಲಾಗಿದೆ.
ಇವರು ಶ್ರಾವಣ ಶನಿವಾರದ ಪ್ರಯುಕ್ತ ಪಾವಗಡದ ಶನಿಮಹಾತ್ಮ ಸ್ವಾಮಿ ದರ್ಶನ ಪಡೆದು ಬೈಕ್ ನಲ್ಲಿ ವಾಪಸ್ ಹಿಂದಿರುಗುತಿದ್ದಾಗ ದ್ವಿಚಕ್ರ ವಾಹನದ ಚಕ್ರ ಪಂಕ್ಚರ್ ಆಗಿ ರಸ್ತೆಗೆ ಬಿದ್ದಿದ್ದಾರೆ. ಆದೇ ಸಮಯದಲ್ಲಿ ಹಿಂಬದಿಯಿಂದ ಬಂದ ದೊಡ್ಡ ವಾಹನ ಅವರ ತಲೆ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ.
ಘಟನೆಯ ಮಾಹಿತಿ ಪಡೆದ ಅರಸೀಕೆರೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಾರಾಸಿಂಗ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q