ನಿಮ್ಮ ಸೇನಾ ಪಡೆಗಳನ್ನು ಹಿಂಪಡೆಯಿರಿ ಮತ್ತು ಯುದ್ಧವನ್ನು ನಿಲ್ಲಿಸಿ ಎಂದು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರಸ್ ಮನವಿ ಮಾಡಿದ್ದಾರೆ.
ಯುದ್ಧ ಘೋಷಣೆಗೂ ಮುನ್ನಾ ಮಾತನಾಡಿರುವ ಅವರು, ರಷ್ಯಾ ಅಧ್ಯಕ್ಷರು ಕೂಡಲೇ ಮಾನವೀಯತೆ ಹೆಸರಿನಲ್ಲಿ ಯುದ್ಧವನ್ನು ನಿಲ್ಲಿಸಬೇಕು. ರಕ್ಷಣಾ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು. ಯುದ್ಧದಿಂದ ಉಕ್ರೇನ್ ಮೇಲೆ ಪರಿಣಾಮ ಬೀರಲಿದೆ ಮತ್ತು ಜಾಗತಿಕ ಆರ್ಥಿಕತೆ ಕುಸಿಯಲಿದೆ ಎಂದು ಎಚ್ಚರಿಸಿದ್ದಾರೆ.
ಯುದ್ಧದ ಪರಿಸ್ಥಿತಿಯನ್ನು ಅವಲೋಕಿಸಲು ಅವರು ಭದ್ರತಾ ಮಂಡಳಿಯ ತುರ್ತು ಸಭೆ ಕರೆದಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB