ಕೊರಟಗೆರೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಡಾ.ಜಿ.ಪರಮೇಶ್ವರ್ ಯುವಪಡೆ ಹಾಗೂ ಯುವ ಕಾಂಗ್ರೆಸ್ ಮತ್ತು ಎನ್.ಎಸ್.ಯು.ಐ. ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮೂರು ದಿನಗಳ ಕಾಲ ಡಾ.ಜಿ.ಪರಮೇಶ್ವರ್ ಕಪ್ ಕಬಡ್ಡಿ ಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಗ್ರಾಮೀಣ ಪ್ರದೇಶದ ಯುವ ಕ್ರೀಡಾಪಟು ಗುರುತಿಸುವುದೇ ಕಬಡ್ಡಿ. ಹಬ್ಬದ ಕಾರ್ಯಕ್ರಮದ ಉದ್ದೇಶ, ರಾಜ್ಯ , ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಕೊರಟಗೆರೆ ಕ್ಷೇತ್ರದ ಯುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿವರ್ಷವೂ ವಿಶೇಷ ರೀತಿಯ ಕಾರ್ಯಕ್ರಮ ರೂಪಿಸುತ್ತೇನೆ ಎಂದು ತಿಳಿಸಿದರು.
ಈ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ 17 ತಂಡಗಳು ಭಾಗವಹಿಸಿದ್ದು, ಮೊದಲನೆಯ ಬಹುಮಾನ ಒಂದು ಲಕ್ಷ ರೂ. ಹಾಗೂ ಪಾರಿತೋಷಕವನ್ನು ಕೊರಟಗೆರೆಯ ಎ ತಂಡ (ಹಿರಿಯರ ತಂಡ ) ಪಡೆದರು.
ಎರಡನೆಯ ಬಹುಮಾನವನ್ನು ಐವತ್ತು ಸಾವಿರ ರೂ ಹಾಗೂ ಪಾರಿತೋಷಕವನ್ನು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಕೋರಾ ತಂಡ ಪಡೆದರು.
ಮೂರನೆಯ ಬಹುಮಾನವನ್ನು ಕೊರಟಗೆರೆಯ ಬಿ ತಂಡ (ಕಿರಿಯರ ತಂಡ ) ಇಪ್ಪತೈದು ಸಾವಿರ ರೂ ಹಾಗೂ ಪಾರಿತೋಷಕವನ್ನು ಪಡೆದರು. ನಾಲ್ಕನೇ ಬಹುಮಾನವನ್ನು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಹೊಳವನಹಳ್ಳಿ ತಂಡ ಹತ್ತುಸಾವಿರ ರೂ ಹಾಗೂ ಪಾರಿತೋಷಕವನ್ನು ಪಡೆದರು.
ಈ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ ನಾರಾಯಣ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ಕುಮಾರ್ ಓಬಳರಾಜು , ಎ.ಡಿ ಬಲರಾಮಯ್ಯ, ನಂದೀಶ್, K L M ಮಂಜುನಾಥ್ , ರವಿಕುಮಾರ್, ಅರವಿಂದ್ , ಮೈಲಾರಪ್ಪ ಇನ್ನಿತರರು ಹಾಜರಿದ್ದರು.
ವರದಿ: ಮಾರುತಿ ಪ್ರಸಾದ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB